<p><strong>* 1948, ಫೆಬ್ರುವರಿ 24: </strong>ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಅಯ್ಯಂಗಾರಿ ಬ್ರಾಹ್ಮಣ ಕುಟುಂಬದಲ್ಲಿ ಜನನ.<br /> <br /> * ತಂದೆ ಹೆಸರು ಜಯರಾಮ್, ತಾಯಿ ಹೆಸರು ವೇದವಲ್ಲಿ (ನಟಿ ಸಂಧ್ಯಾ). ಜನಿಸಿದಾಗ ಜಯಾ ಅವರಿಗೆ ಇಟ್ಟ ಹೆಸರು ‘ಕೋಮಲವಲ್ಲಿ’.<br /> <br /> * ಕೋಮಲವಲ್ಲಿಗೆ ಒಂದು ವರ್ಷ ವಯಸ್ಸಾಗಿದ್ದಾಗ, ಜಯಲಲಿತಾ ಎಂದು ನಾಮಕರಣ ಮಾಡಲಾಯಿತು.<br /> <br /> * ಜಯಾ ಅವರ ತಂದೆಯ ತಂದೆ ನರಸಿಂಹನ್ ರಂಗಾಚಾರಿ ಅವರು ಮೈಸೂರಿನ ಜಯಚಾಮರಾಜೇಂದ್ರ ಒಡೆಯರ್ ಆಸ್ಥಾನದಲ್ಲಿ ವೈದ್ಯರಾಗಿದ್ದರು.<br /> <br /> * ಜಯಾ ಅವರ ತಾಯಿಯ ತಂದೆ ರಂಗಸ್ವಾಮಿ ಅಯ್ಯಂಗಾರ್ ಅವರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಉದ್ಯೋಗದಲ್ಲಿದ್ದರು.<br /> <br /> * ಜಯಾ ಎರಡು ವರ್ಷದವರಾಗಿದ್ದಾಗ ತಂದೆ ಜಯರಾಮ್ ತೀರಿಕೊಂಡರು. ನಂತರ ತಾಯಿ ವೇದವಲ್ಲಿ, ಬೆಂಗಳೂರಿನ ತಂದೆಯ ಮನೆಗೆ ಮರಳಿದರು.<br /> <br /> * 1952ರಲ್ಲಿ ಮದ್ರಾಸಿಗೆ ತೆರಳಿದ ವೇದವಲ್ಲಿ, ಅಲ್ಲಿ ‘ಸಂಧ್ಯಾ’ ಎಂಬ ಹೆಸರಿನಲ್ಲಿ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದರು.<br /> <br /> * 1950ರಿಂದ 1958ರವೆಗೆ ಜಯಲಲಿತಾ ಅವರು ಮೈಸೂರಿನಲ್ಲಿ ತಮ್ಮ ಅಜ್ಜ–ಅಜ್ಜಿ ಜತೆ ಇದ್ದರು.<br /> <br /> * ಜಯಾ ಅವರು ಬೆಂಗಳೂರಿನ ಬಿಷಪ್ ಕಾಟನ್ ಬಾಲಕಿಯರ ಶಾಲೆಯ ವಿದ್ಯಾರ್ಥಿನಿಯೂ ಹೌದು.<br /> <br /> * ಮದ್ರಾಸಿಗೆ ವಾಸ್ತವ್ಯ ಬದಲಾಯಿಸಿದ ನಂತರ ಜಯಾ ಅವರು, ಅಲ್ಲಿ ಬಾಲ್ಯದ ಶಿಕ್ಷಣ ಪೂರೈಸಿದರು.<br /> <br /> * 1960 ಮೇ ತಿಂಗಳಲ್ಲಿ ಮೈಲಾಪುರದಲ್ಲಿ ಭರತನಾಟ್ಯ ಕಲಾವಿದೆಯಾಗಿ ರಂಗ ಪ್ರವೇಶ.<br /> <br /> * 1961ರಲ್ಲಿ ಕನ್ನಡದ ’ಶ್ರೀಶೈಲ ಮಹಾತ್ಮೆ’ ಸಿನಿಮಾದಲ್ಲಿ ಬಾಲನಟಿಯಾಗಿ ಅಭಿನಯ.<br /> <br /> * 1964ರಲ್ಲಿ ಬಿ.ಆರ್. ಪಂತುಲು ಅವರ ‘ಚಿನ್ನದ ಗೊಂಬೆ’ ಚಿತ್ರದಲ್ಲಿ ಕಲ್ಯಾಣ್ ಕುಮಾರ್ ಜೊತೆ ಅಭಿನಯ.<br /> <br /> * 1964ರಲ್ಲಿ ವೈ.ಜಿ. ಪಾರ್ಥಸಾರಥಿ ನಾಟಕ ತಂಡದ ಮೂಲಕ, ರಂಗಭೂಮಿಗೆ ಪ್ರವೇಶ.<br /> <br /> * 1965ರಲ್ಲಿ ವೆನ್ನಿರ ಅಡೈ ಚಿತ್ರದ ಮೂಲಕ ತಮಿಳು ಸಿನಿಮಾ ರಂಗ ಪ್ರವೇಶ. ತಮಿಳು ಸಿನಿಮಾದಲ್ಲಿ ಸ್ಕರ್ಟ್ ಧರಿಸಿ ಅಭಿನಯಿಸಿದ ಮೊದಲ ನಟಿ ಜಯಾ!<br /> <br /> * ಜಯಾ ಅವರು ತೆಲುಗು, ಹಿಂದಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.<br /> <br /> * 1982ರಲ್ಲಿ ಎಐಎಡಿಎಂಕೆ ಪಕ್ಷ ಸೇರ್ಪಡೆ.<br /> <br /> * 1983ರಲ್ಲಿ ಪಕ್ಷದ ಪ್ರಚಾರ ವಿಭಾಗದ ಕಾರ್ಯದರ್ಶಿಯಾಗಿ ನೇಮಕ.<br /> <br /> * 1984ರಲ್ಲಿ ರಾಜ್ಯಸಭೆ ಪ್ರವೇಶ.<br /> <br /> * 1989ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು, ತಮಿಳುನಾಡು ವಿಧಾನಸಭೆ ಪ್ರವೇಶ. ವಿರೋಧ ಪಕ್ಷದ ನಾಯಕಿಯಾಗಿ ಕರ್ತವ್ಯ ನಿರ್ವಹಣೆ.<br /> <br /> * 1989ರ ಮಾರ್ಚ್ 25ರಂದು ವಿಧಾನಸಭೆಯಲ್ಲಿ ನಡೆದ ಗಲಾಟೆಯಲ್ಲಿ, ಜಯಾ ಮೇಲೆ ಹಲ್ಲೆ.<br /> <br /> * 1991ರಲ್ಲಿ ತಮಿಳುನಾಡಿನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.<br /> <br /> * 1996ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಾ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ಭಾರಿ ಸೋಲು.<br /> <br /> * ಕಲರ್ ಟಿ.ವಿ. ಹಗರಣದಲ್ಲಿ ಲಂಚ ಪಡೆದ ಆರೋಪದ ಅಡಿ 1996ರ ಡಿಸೆಂಬರ್ನಲ್ಲಿ ಜಯಲಲಿತಾ ಬಂಧನ.<br /> <br /> * 2000ನೇ ಇಸವಿಯಲ್ಲಿ ಈ ಆರೋಪದಿಂದ ಮುಕ್ತರಾದ ಜಯಾ.<br /> <br /> * ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜಯಾ ತಪ್ಪಿತಸ್ಥೆ ಎಂದು ನ್ಯಾಯಾಲಯ ಘೋಷಿಸಿದ್ದ ಕಾರಣ, 2001ರ ಚುನಾವಣೆ ಸ್ಪರ್ಧಿಸದಂತೆ ನಿರ್ಬಂಧ. ಆದರೂ ಚುನಾವಣೆ ನಂತರ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.<br /> <br /> * ಆದರೆ, ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥೆ ಎಂದು ಘೋಷಣೆ ಆಗಿರುವಾಗ ಮುಖ್ಯಮಂತ್ರಿ ಆಗುವಂತಿಲ್ಲ ಎಂದು ನ್ಯಾಯಾಲಯ ಹೇಳಿದ ಕಾರಣ, ಅಧಿಕಾರದಿಂದ ಕೆಳಗಿಳಿದ ಜಯಾ.<br /> <br /> * ಕೆಲವು ಆರೋಪಗಳಿಂದ ಜಯಾ ಅವರನ್ನು ಮದ್ರಾಸ್ ಹೈಕೋರ್ಟ್ ದೋಷಮುಕ್ತಗಿಳಿಸಿದ ಕಾರಣ, 2003ರಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.<br /> * 2011ರಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜಯಾ ಅವರಿಂದ ಮೂರನೆಯ ಬಾರಿ ಅಧಿಕಾರ ಸ್ವೀಕಾರ.<br /> <br /> <strong>* 2014, ಸೆಪ್ಟೆಂಬರ್ 27: </strong>ಅಕ್ರಮ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ಜಯಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರಿನ ವಿಶೇಷ ನ್ಯಾಯಾಲಯ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಜಯಾ.<br /> <br /> <strong>* 2015 ಮೇ 11:</strong> ಈ ಪ್ರಕರಣದಲ್ಲಿ ಜಯಾ ತಪ್ಪು ಮಾಡಿಲ್ಲ ಎಂದು ಆದೇಶಿಸಿದ ಕರ್ನಾಟಕ ಹೈಕೋರ್ಟ್. ಮತ್ತೆ ಮುಖ್ಯಮಂತ್ರಿಯಾದ ಜಯಾ.<br /> <br /> * 2016ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಜಯ ಸಾಧಿಸಿದ ಜಯಾ ಪಕ್ಷ. ಮುಖ್ಯಮಂತ್ರಿಯಾಗಿ ಮತ್ತೆ ಅಧಿಕಾರ ಸ್ವೀಕಾರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>* 1948, ಫೆಬ್ರುವರಿ 24: </strong>ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಯ ಅಯ್ಯಂಗಾರಿ ಬ್ರಾಹ್ಮಣ ಕುಟುಂಬದಲ್ಲಿ ಜನನ.<br /> <br /> * ತಂದೆ ಹೆಸರು ಜಯರಾಮ್, ತಾಯಿ ಹೆಸರು ವೇದವಲ್ಲಿ (ನಟಿ ಸಂಧ್ಯಾ). ಜನಿಸಿದಾಗ ಜಯಾ ಅವರಿಗೆ ಇಟ್ಟ ಹೆಸರು ‘ಕೋಮಲವಲ್ಲಿ’.<br /> <br /> * ಕೋಮಲವಲ್ಲಿಗೆ ಒಂದು ವರ್ಷ ವಯಸ್ಸಾಗಿದ್ದಾಗ, ಜಯಲಲಿತಾ ಎಂದು ನಾಮಕರಣ ಮಾಡಲಾಯಿತು.<br /> <br /> * ಜಯಾ ಅವರ ತಂದೆಯ ತಂದೆ ನರಸಿಂಹನ್ ರಂಗಾಚಾರಿ ಅವರು ಮೈಸೂರಿನ ಜಯಚಾಮರಾಜೇಂದ್ರ ಒಡೆಯರ್ ಆಸ್ಥಾನದಲ್ಲಿ ವೈದ್ಯರಾಗಿದ್ದರು.<br /> <br /> * ಜಯಾ ಅವರ ತಾಯಿಯ ತಂದೆ ರಂಗಸ್ವಾಮಿ ಅಯ್ಯಂಗಾರ್ ಅವರು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನಲ್ಲಿ ಉದ್ಯೋಗದಲ್ಲಿದ್ದರು.<br /> <br /> * ಜಯಾ ಎರಡು ವರ್ಷದವರಾಗಿದ್ದಾಗ ತಂದೆ ಜಯರಾಮ್ ತೀರಿಕೊಂಡರು. ನಂತರ ತಾಯಿ ವೇದವಲ್ಲಿ, ಬೆಂಗಳೂರಿನ ತಂದೆಯ ಮನೆಗೆ ಮರಳಿದರು.<br /> <br /> * 1952ರಲ್ಲಿ ಮದ್ರಾಸಿಗೆ ತೆರಳಿದ ವೇದವಲ್ಲಿ, ಅಲ್ಲಿ ‘ಸಂಧ್ಯಾ’ ಎಂಬ ಹೆಸರಿನಲ್ಲಿ ಸಿನಿಮಾಗಳಲ್ಲಿ ನಟಿಸಲು ಆರಂಭಿಸಿದರು.<br /> <br /> * 1950ರಿಂದ 1958ರವೆಗೆ ಜಯಲಲಿತಾ ಅವರು ಮೈಸೂರಿನಲ್ಲಿ ತಮ್ಮ ಅಜ್ಜ–ಅಜ್ಜಿ ಜತೆ ಇದ್ದರು.<br /> <br /> * ಜಯಾ ಅವರು ಬೆಂಗಳೂರಿನ ಬಿಷಪ್ ಕಾಟನ್ ಬಾಲಕಿಯರ ಶಾಲೆಯ ವಿದ್ಯಾರ್ಥಿನಿಯೂ ಹೌದು.<br /> <br /> * ಮದ್ರಾಸಿಗೆ ವಾಸ್ತವ್ಯ ಬದಲಾಯಿಸಿದ ನಂತರ ಜಯಾ ಅವರು, ಅಲ್ಲಿ ಬಾಲ್ಯದ ಶಿಕ್ಷಣ ಪೂರೈಸಿದರು.<br /> <br /> * 1960 ಮೇ ತಿಂಗಳಲ್ಲಿ ಮೈಲಾಪುರದಲ್ಲಿ ಭರತನಾಟ್ಯ ಕಲಾವಿದೆಯಾಗಿ ರಂಗ ಪ್ರವೇಶ.<br /> <br /> * 1961ರಲ್ಲಿ ಕನ್ನಡದ ’ಶ್ರೀಶೈಲ ಮಹಾತ್ಮೆ’ ಸಿನಿಮಾದಲ್ಲಿ ಬಾಲನಟಿಯಾಗಿ ಅಭಿನಯ.<br /> <br /> * 1964ರಲ್ಲಿ ಬಿ.ಆರ್. ಪಂತುಲು ಅವರ ‘ಚಿನ್ನದ ಗೊಂಬೆ’ ಚಿತ್ರದಲ್ಲಿ ಕಲ್ಯಾಣ್ ಕುಮಾರ್ ಜೊತೆ ಅಭಿನಯ.<br /> <br /> * 1964ರಲ್ಲಿ ವೈ.ಜಿ. ಪಾರ್ಥಸಾರಥಿ ನಾಟಕ ತಂಡದ ಮೂಲಕ, ರಂಗಭೂಮಿಗೆ ಪ್ರವೇಶ.<br /> <br /> * 1965ರಲ್ಲಿ ವೆನ್ನಿರ ಅಡೈ ಚಿತ್ರದ ಮೂಲಕ ತಮಿಳು ಸಿನಿಮಾ ರಂಗ ಪ್ರವೇಶ. ತಮಿಳು ಸಿನಿಮಾದಲ್ಲಿ ಸ್ಕರ್ಟ್ ಧರಿಸಿ ಅಭಿನಯಿಸಿದ ಮೊದಲ ನಟಿ ಜಯಾ!<br /> <br /> * ಜಯಾ ಅವರು ತೆಲುಗು, ಹಿಂದಿ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ.<br /> <br /> * 1982ರಲ್ಲಿ ಎಐಎಡಿಎಂಕೆ ಪಕ್ಷ ಸೇರ್ಪಡೆ.<br /> <br /> * 1983ರಲ್ಲಿ ಪಕ್ಷದ ಪ್ರಚಾರ ವಿಭಾಗದ ಕಾರ್ಯದರ್ಶಿಯಾಗಿ ನೇಮಕ.<br /> <br /> * 1984ರಲ್ಲಿ ರಾಜ್ಯಸಭೆ ಪ್ರವೇಶ.<br /> <br /> * 1989ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು, ತಮಿಳುನಾಡು ವಿಧಾನಸಭೆ ಪ್ರವೇಶ. ವಿರೋಧ ಪಕ್ಷದ ನಾಯಕಿಯಾಗಿ ಕರ್ತವ್ಯ ನಿರ್ವಹಣೆ.<br /> <br /> * 1989ರ ಮಾರ್ಚ್ 25ರಂದು ವಿಧಾನಸಭೆಯಲ್ಲಿ ನಡೆದ ಗಲಾಟೆಯಲ್ಲಿ, ಜಯಾ ಮೇಲೆ ಹಲ್ಲೆ.<br /> <br /> * 1991ರಲ್ಲಿ ತಮಿಳುನಾಡಿನ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.<br /> <br /> * 1996ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಯಾ ನೇತೃತ್ವದ ಎಐಎಡಿಎಂಕೆ ಪಕ್ಷಕ್ಕೆ ಭಾರಿ ಸೋಲು.<br /> <br /> * ಕಲರ್ ಟಿ.ವಿ. ಹಗರಣದಲ್ಲಿ ಲಂಚ ಪಡೆದ ಆರೋಪದ ಅಡಿ 1996ರ ಡಿಸೆಂಬರ್ನಲ್ಲಿ ಜಯಲಲಿತಾ ಬಂಧನ.<br /> <br /> * 2000ನೇ ಇಸವಿಯಲ್ಲಿ ಈ ಆರೋಪದಿಂದ ಮುಕ್ತರಾದ ಜಯಾ.<br /> <br /> * ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಜಯಾ ತಪ್ಪಿತಸ್ಥೆ ಎಂದು ನ್ಯಾಯಾಲಯ ಘೋಷಿಸಿದ್ದ ಕಾರಣ, 2001ರ ಚುನಾವಣೆ ಸ್ಪರ್ಧಿಸದಂತೆ ನಿರ್ಬಂಧ. ಆದರೂ ಚುನಾವಣೆ ನಂತರ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.<br /> <br /> * ಆದರೆ, ಕ್ರಿಮಿನಲ್ ಪ್ರಕರಣದಲ್ಲಿ ತಪ್ಪಿತಸ್ಥೆ ಎಂದು ಘೋಷಣೆ ಆಗಿರುವಾಗ ಮುಖ್ಯಮಂತ್ರಿ ಆಗುವಂತಿಲ್ಲ ಎಂದು ನ್ಯಾಯಾಲಯ ಹೇಳಿದ ಕಾರಣ, ಅಧಿಕಾರದಿಂದ ಕೆಳಗಿಳಿದ ಜಯಾ.<br /> <br /> * ಕೆಲವು ಆರೋಪಗಳಿಂದ ಜಯಾ ಅವರನ್ನು ಮದ್ರಾಸ್ ಹೈಕೋರ್ಟ್ ದೋಷಮುಕ್ತಗಿಳಿಸಿದ ಕಾರಣ, 2003ರಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ.<br /> * 2011ರಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜಯಾ ಅವರಿಂದ ಮೂರನೆಯ ಬಾರಿ ಅಧಿಕಾರ ಸ್ವೀಕಾರ.<br /> <br /> <strong>* 2014, ಸೆಪ್ಟೆಂಬರ್ 27: </strong>ಅಕ್ರಮ ಆಸ್ತಿ ಸಂಪಾದಿಸಿದ ಪ್ರಕರಣದಲ್ಲಿ ಜಯಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬೆಂಗಳೂರಿನ ವಿಶೇಷ ನ್ಯಾಯಾಲಯ. ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಜಯಾ.<br /> <br /> <strong>* 2015 ಮೇ 11:</strong> ಈ ಪ್ರಕರಣದಲ್ಲಿ ಜಯಾ ತಪ್ಪು ಮಾಡಿಲ್ಲ ಎಂದು ಆದೇಶಿಸಿದ ಕರ್ನಾಟಕ ಹೈಕೋರ್ಟ್. ಮತ್ತೆ ಮುಖ್ಯಮಂತ್ರಿಯಾದ ಜಯಾ.<br /> <br /> * 2016ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಜಯ ಸಾಧಿಸಿದ ಜಯಾ ಪಕ್ಷ. ಮುಖ್ಯಮಂತ್ರಿಯಾಗಿ ಮತ್ತೆ ಅಧಿಕಾರ ಸ್ವೀಕಾರ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>