<p><strong>ನವದೆಹಲಿ: </strong>ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರ ಈವರೆಗೆ ₹2,000 ಕೋಟಿ ಅಕ್ರಮ ಹಣ ಬಹಿರಂಗವಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.</p>.<p>ನವೆಂಬರ್ 8ರ ನಂತರ ಆದಾಯ ತೆರಿಗೆ ಇಲಾಖೆ 400ಕ್ಕಿಂತಲೂ ಹೆಚ್ಚು ಅಕ್ರಮ ಹಣ ಪ್ರಕರಣಗಳನ್ನು ಬೇಧಿಸಿದ್ದು, ಇದರಲ್ಲಿ ₹130 ಕೋಟಿ ಹಣ ಮತ್ತು ಚಿನ್ನಾಭರಣಗಳು ಪತ್ತೆಯಾಗಿದೆ.</p>.<p>ಅಕ್ರಮ ಹಣದಲ್ಲಿ ರದ್ದು ಮಾಡಿರುವ ನೋಟುಗಳ ಸಂಖ್ಯೆಯೇ ಜಾಸ್ತಿಯಾಗಿದ್ದು, ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಅತೀ ಹೆಚ್ಚು ಮೊತ್ತ ಪತ್ತೆಯಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.</p>.<p>30ಕ್ಕಿಂತಲೂ ಹೆಚ್ಚು ಪ್ರಕರಣಗಳಲ್ಲಿ ಆದಾಯ ತೆರಿಗೆ ಕಾಯ್ದೆಯನ್ನು ಉಲ್ಲಂಘಿಸಿದ ಪ್ರಕರಣಗಳ ಸಂಖ್ಯೆಯೇ ಹೆಚ್ಚು ಇದೆ ಎಂದು ಹೇಳಲಾಗಿದೆ.</p>.<p>ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ಮತ್ತು ಇಬ್ಬರು ಗುತ್ತಿಗೆದಾರರ ನಿವಾಸದ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಈವರೆಗೆ ₹ 6 ಕೋಟಿ ಅಧಿಕ ನಗದು ವಶಕ್ಕೆ ಪಡೆದಿದ್ದರು.</p>.<p>ದಾಳಿ ವೇಳೆ ₹ 4.7 ಕೋಟಿಯಷ್ಟು ₹ 2 ಸಾವಿರ ಮುಖ ಬೆಲೆಯ ಹೊಸ ನೋಟುಗಳು ಪತ್ತೆಯಾಗಿದ್ದು,ಉಳಿದ ಹಣ ₹100 ಮತ್ತು ಹಳೆಯ ₹ 500 ಮುಖ ಬೆಲೆಯ ನೋಟುಗಳಲ್ಲಿ ಸಿಕ್ಕಿದೆ.</p>.<p>ಅಲ್ಲದೆ, ₹ 2 ಕೋಟಿ ಮೌಲ್ಯದ 7 ಕೆಜಿಯಷ್ಟು ಚಿನ್ನದ ಗಟ್ಟಿ ಮತ್ತು 7 ಕೆಜಿಯಷ್ಟು ಆಭರಣಗಳು ದಾಳಿ ವೇಳೆ ವಶಪಡಿಸಿಕೊಳ್ಳಲಾಗಿದೆ. ದುಬಾರಿ ಲ್ಯಾಂಬರ್ಗಿನಿ ಕಾರೊಂದನ್ನೂ ಜಪ್ತಿ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರ ಈವರೆಗೆ ₹2,000 ಕೋಟಿ ಅಕ್ರಮ ಹಣ ಬಹಿರಂಗವಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.</p>.<p>ನವೆಂಬರ್ 8ರ ನಂತರ ಆದಾಯ ತೆರಿಗೆ ಇಲಾಖೆ 400ಕ್ಕಿಂತಲೂ ಹೆಚ್ಚು ಅಕ್ರಮ ಹಣ ಪ್ರಕರಣಗಳನ್ನು ಬೇಧಿಸಿದ್ದು, ಇದರಲ್ಲಿ ₹130 ಕೋಟಿ ಹಣ ಮತ್ತು ಚಿನ್ನಾಭರಣಗಳು ಪತ್ತೆಯಾಗಿದೆ.</p>.<p>ಅಕ್ರಮ ಹಣದಲ್ಲಿ ರದ್ದು ಮಾಡಿರುವ ನೋಟುಗಳ ಸಂಖ್ಯೆಯೇ ಜಾಸ್ತಿಯಾಗಿದ್ದು, ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಅತೀ ಹೆಚ್ಚು ಮೊತ್ತ ಪತ್ತೆಯಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.</p>.<p>30ಕ್ಕಿಂತಲೂ ಹೆಚ್ಚು ಪ್ರಕರಣಗಳಲ್ಲಿ ಆದಾಯ ತೆರಿಗೆ ಕಾಯ್ದೆಯನ್ನು ಉಲ್ಲಂಘಿಸಿದ ಪ್ರಕರಣಗಳ ಸಂಖ್ಯೆಯೇ ಹೆಚ್ಚು ಇದೆ ಎಂದು ಹೇಳಲಾಗಿದೆ.</p>.<p>ಡಿಸೆಂಬರ್ 2ರಂದು ಬೆಂಗಳೂರಿನಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳು ಮತ್ತು ಇಬ್ಬರು ಗುತ್ತಿಗೆದಾರರ ನಿವಾಸದ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಈವರೆಗೆ ₹ 6 ಕೋಟಿ ಅಧಿಕ ನಗದು ವಶಕ್ಕೆ ಪಡೆದಿದ್ದರು.</p>.<p>ದಾಳಿ ವೇಳೆ ₹ 4.7 ಕೋಟಿಯಷ್ಟು ₹ 2 ಸಾವಿರ ಮುಖ ಬೆಲೆಯ ಹೊಸ ನೋಟುಗಳು ಪತ್ತೆಯಾಗಿದ್ದು,ಉಳಿದ ಹಣ ₹100 ಮತ್ತು ಹಳೆಯ ₹ 500 ಮುಖ ಬೆಲೆಯ ನೋಟುಗಳಲ್ಲಿ ಸಿಕ್ಕಿದೆ.</p>.<p>ಅಲ್ಲದೆ, ₹ 2 ಕೋಟಿ ಮೌಲ್ಯದ 7 ಕೆಜಿಯಷ್ಟು ಚಿನ್ನದ ಗಟ್ಟಿ ಮತ್ತು 7 ಕೆಜಿಯಷ್ಟು ಆಭರಣಗಳು ದಾಳಿ ವೇಳೆ ವಶಪಡಿಸಿಕೊಳ್ಳಲಾಗಿದೆ. ದುಬಾರಿ ಲ್ಯಾಂಬರ್ಗಿನಿ ಕಾರೊಂದನ್ನೂ ಜಪ್ತಿ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>