ಅಥಣಿ (ಬೆಳಗಾವಿ ಜಿಲ್ಲೆ): ಮನೆಯಂಗಳದಲ್ಲಿ ಆಟವಾಡುತ್ತಿದ್ದ ಒಂಬತ್ತು ವರ್ಷದ ಬಾಲಕನನ್ನು ಶನಿವಾರ ಅಪಹರಿಸಿ, ಎದೆ, ಕಣ್ಣು, ಕುತ್ತಿಗೆಗೆ ಸಲಾಕೆಯಿಂದ ಚುಚ್ಚಿ ಗಾಯಗೊಳಿಸಿ, ಕಲ್ಲುಗುಂಡಿಯಲ್ಲಿ ಹೂತು ಹಾಕಿದ್ದ ಪ್ರಕರಣ ತಾಲ್ಲೂಕಿನ ಕೊಕಟನೂರು ಗ್ರಾಮದಲ್ಲಿ ಭಾನುವಾರ ಬೆಳಕಿಗೆ ಬಂದಿದೆ. ವಾಮಾಚಾರಕ್ಕೆ ಬಲಿಕೊಡುವ ಉದ್ದೇಶದಿಂದ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.