<p><strong>ಬೆಂಗಳೂರು:</strong> ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಕನ್ನಡದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್ಇಇಟಿ) ನಡೆಸಬೇಕೆಂದು ಚರ್ಚೆ ನಡೆಯುತ್ತಿದೆ. ಆದರೆ, 24 ವರ್ಷದ ಹಿಂದೆ ಆರಂಭವಾಗಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನೇ ಕನ್ನಡದಲ್ಲಿ ಪೂರ್ಣಪ್ರಮಾಣದಲ್ಲಿ ನಡೆಸಲು ಸರ್ಕಾರಕ್ಕೆ ಇದುವರೆಗೆ ಸಾಧ್ಯವಾಗಿಲ್ಲ.</p>.<p>ವೃತ್ತಿಪರ ಕೋರ್ಸ್ಗಳ ಪರೀಕ್ಷೆ ಮೂರು ವರ್ಷ ಪ್ರಾದೇಶಿಕ ಭಾಷೆಗಳಲ್ಲಿ ನಡೆದಿದ್ದರೆ ಮಾತ್ರ ಎನ್ಇಇಟಿ ಪರೀಕ್ಷೆ ನಡೆಸಲು ಅವಕಾಶವಿದೆ. ಆದರೆ, 1993ರಿಂದ ಸಿಇಟಿ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕನ್ನಡದಲ್ಲಿ ಪರೀಕ್ಷೆ ನಡೆಸಲು ಕಾಳಜಿ ತೋರಿಲ್ಲ.</p>.<p>ಆದರೆ, 2006ರಲ್ಲಿ ಒಮ್ಮೆ ಮಾತ್ರ ಕನ್ನಡದಲ್ಲೂ ಸಿಇಟಿ ಪರೀಕ್ಷೆ ನಡೆಸುವ ಪ್ರಯತ್ನ ಮಾಡಲಾಗಿತ್ತು. ಆಗ 16 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು. ಅನಂತರ ಸರ್ಕಾರ ಅದನ್ನು ಮುಂದುವರಿಸಲಿಲ್ಲ.</p>.<p>‘ಕನ್ನಡ ಪಠ್ಯಪುಸ್ತಕಗಳು ಸಿಗದೆ ಇರುವುದರಿಂದ ಮತ್ತು ಕನ್ನಡ ಬೋಧನೆ ಇಲ್ಲದಿರುವುದರಿಂದ ಇಂಗ್ಲಿಷ್ನಲ್ಲಿ ಬರೆಯುವುದೇ ಸುಲಭ ಎಂಬುದು ಬಹುತೇಕ ವಿದ್ಯಾರ್ಥಿಗಳ ಅಭಿಪ್ರಾಯ’ ಎಂದು ಕೆಇಎ ನಿವೃತ್ತ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪ್ರತಿ ಬಾರಿ ಸಿಇಟಿ ಶುಲ್ಕ ಪಾವತಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಿವರದ ಜೊತೆಗೆ ಯಾವ ಭಾಷೆಯಲ್ಲಿ ಪರೀಕ್ಷೆ ಬರೆಯುತ್ತೀರಿ ಎಂಬ ಅಂಶವನ್ನೂ ಕೇಳಲಾಗುತ್ತದೆ. ಆಗ ಒಬ್ಬ ವಿದ್ಯಾರ್ಥಿಯೂ ‘ಕನ್ನಡ’ ಎಂದು ನಮೂದಿಸುವುದಿಲ್ಲ ಎಂದು ಅವರು ಹೇಳಿದರು.</p>.<p>ಈಗ ಮತ್ತೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದ್ದು, ಇದಕ್ಕೆ ಪೂರಕವಾಗಿ ವಿಜ್ಞಾನ ವಿಷಯದ ಪಠ್ಯಪುಸ್ತಕಗಳನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ.</p>.<p>ಕನ್ನಡದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾದರೆ ಪೂರಕ ಪಠ್ಯವಸ್ತು ಕನ್ನಡದಲ್ಲಿ ಲಭ್ಯ ಇರಬೇಕು ಮತ್ತು ಕಾಲೇಜುಗಳಲ್ಲಿ ಕನ್ನಡದಲ್ಲೇ ಬೋಧನೆ ಮಾಡಬೇಕು. </p>.<p>2017–18ನೇ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪಿಸಿಎಂಬಿ (ಭೌತ ವಿಜ್ಞಾನ, ರಸಾಯನ ವಿಜ್ಞಾನ, ಗಣಿತ, ಜೀವ ವಿಜ್ಞಾನ) ವಿಷಯಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಪಠ್ಯಗಳನ್ನು ಅಳವಡಿಸಿಕೊಳ್ಳಲಾಗಿದ್ದು, ಇಂಗ್ಲಿಷ್ನಲ್ಲಿರುವ ಈ ಪಠ್ಯಗಳನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.</p>.<p>ಮುಂದಿನ ಶೈಕ್ಷಣಿಕ ವರ್ಷ ಆರಂಭ ಆಗುವುದರೊಳಗೆ ಈ ಪಠ್ಯಗಳ ಭಾಷಾಂತರ ಪೂರ್ಣಗೊಂಡರೆ ವಿಜ್ಞಾನ ಕೋರ್ಸ್ಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿದೆ. </p>.<p>2012–13ರಲ್ಲಿ ವಿಜ್ಞಾನ ವಿಷಯಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಹಂಪಿ ಕನ್ನಡ ವಿಶ್ವವಿದ್ಯಾಲಯದೊಂದಿಗೆ ಮಾತುಕತೆ ನಡೆಸಲಾಗಿತ್ತು. ಆದರೆ, ಭಾಷಾಂತರಕ್ಕೆ ದರ ನಿಗದಿ ಮಾಡುವ ಸಂಬಂಧ ಗೊಂದಲ ಉಂಟಾಗಿ ಈ ಯೋಜನೆ ಕೈಗೂಡಲಿಲ್ಲ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಕೇಂದ್ರದಿಂದ ತಾರತಮ್ಯ: ಕೇರಳ ಆಕ್ಷೇಪ</strong><br /> <strong>ಕೊಚ್ಚಿ (ಪಿಟಿಐ): </strong>ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್ಇಇಟಿ) ಮಲಯಾಳಂ ಭಾಷೆಯಲ್ಲಿ ಬರೆಯಲು ಅವಕಾಶ ನೀಡದೆ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ ಆರೋಪಿಸಿದ್ದಾರೆ.</p>.<p>‘ಇದು ಕೇರಳದ ಜನರಿಗೆ ಮಾಡಿರುವ ಅನ್ಯಾಯ. ಈ ವಿಚಾರದ ಕುರಿತು ಕೂಡಲೇ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಬೇಕು’ ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<p>‘ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ನೀಡುವ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಆದರೆ, ಇವುಗಳಲ್ಲಿ ಮಲಯಾಳಂ ಮತ್ತು ಕನ್ನಡವನ್ನು ಸೇರಿಸಿಲ್ಲ. ಇದು ತಾರತಮ್ಯ ನೀತಿಯಾಗಿದೆ. ಈ ಎರಡೂ ಭಾಷೆಗಳನ್ನು ಸೇರ್ಪಡೆಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.<br /> <br /> <strong>ನಮ್ಮಿಂದ ಲೋಪ ಆಗಿಲ್ಲ: ಸಿ.ಎಂ<br /> ಹುಬ್ಬಳ್ಳಿ:</strong> ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ಕನ್ನಡದಲ್ಲೇ ನಡೆಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ನಡೆಸಿದ್ದ ವಿಡಿಯೊ ಸಂವಾದದ ಸಂದರ್ಭದಲ್ಲಿ ರಾಜ್ಯದ ಅಧಿಕಾರಿಗಳು ಹೇಳಿದ್ದರು. ಆದರೂ ಕೇಂದ್ರ ಸರ್ಕಾರ ಕನ್ನಡವನ್ನು ಕೈಬಿಟ್ಟಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಇಲ್ಲಿ ಆಕ್ಷೇಪಿಸಿದರು.</p>.<p>‘ಈ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಯಾವುದೇ ಲೋಪ ಆಗಿಲ್ಲ’ ಎಂದರು.<br /> <br /> <strong>ಮುಖ್ಯಾಂಶಗಳು</strong><br /> * ವಿಜ್ಞಾನ ಪಠ್ಯಗಳು ಕನ್ನಡದಲ್ಲಿ ಇಲ್ಲ</p>.<p>* ಎನ್ಸಿಇಆರ್ಟಿ ಪಠ್ಯಗಳ ಭಾಷಾಂತರಕ್ಕೆ ಈ ತಿಂಗಳು ಹೊರಟ ಆದೇಶ<br /> * ಕನ್ನಡದಲ್ಲಿ ಬರೆಯಲು ವಿದ್ಯಾರ್ಥಿಗಳ ನಿರಾಸಕ್ತಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ ಕನ್ನಡದಲ್ಲಿ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್ಇಇಟಿ) ನಡೆಸಬೇಕೆಂದು ಚರ್ಚೆ ನಡೆಯುತ್ತಿದೆ. ಆದರೆ, 24 ವರ್ಷದ ಹಿಂದೆ ಆರಂಭವಾಗಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನೇ ಕನ್ನಡದಲ್ಲಿ ಪೂರ್ಣಪ್ರಮಾಣದಲ್ಲಿ ನಡೆಸಲು ಸರ್ಕಾರಕ್ಕೆ ಇದುವರೆಗೆ ಸಾಧ್ಯವಾಗಿಲ್ಲ.</p>.<p>ವೃತ್ತಿಪರ ಕೋರ್ಸ್ಗಳ ಪರೀಕ್ಷೆ ಮೂರು ವರ್ಷ ಪ್ರಾದೇಶಿಕ ಭಾಷೆಗಳಲ್ಲಿ ನಡೆದಿದ್ದರೆ ಮಾತ್ರ ಎನ್ಇಇಟಿ ಪರೀಕ್ಷೆ ನಡೆಸಲು ಅವಕಾಶವಿದೆ. ಆದರೆ, 1993ರಿಂದ ಸಿಇಟಿ ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಕನ್ನಡದಲ್ಲಿ ಪರೀಕ್ಷೆ ನಡೆಸಲು ಕಾಳಜಿ ತೋರಿಲ್ಲ.</p>.<p>ಆದರೆ, 2006ರಲ್ಲಿ ಒಮ್ಮೆ ಮಾತ್ರ ಕನ್ನಡದಲ್ಲೂ ಸಿಇಟಿ ಪರೀಕ್ಷೆ ನಡೆಸುವ ಪ್ರಯತ್ನ ಮಾಡಲಾಗಿತ್ತು. ಆಗ 16 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು. ಅನಂತರ ಸರ್ಕಾರ ಅದನ್ನು ಮುಂದುವರಿಸಲಿಲ್ಲ.</p>.<p>‘ಕನ್ನಡ ಪಠ್ಯಪುಸ್ತಕಗಳು ಸಿಗದೆ ಇರುವುದರಿಂದ ಮತ್ತು ಕನ್ನಡ ಬೋಧನೆ ಇಲ್ಲದಿರುವುದರಿಂದ ಇಂಗ್ಲಿಷ್ನಲ್ಲಿ ಬರೆಯುವುದೇ ಸುಲಭ ಎಂಬುದು ಬಹುತೇಕ ವಿದ್ಯಾರ್ಥಿಗಳ ಅಭಿಪ್ರಾಯ’ ಎಂದು ಕೆಇಎ ನಿವೃತ್ತ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಪ್ರತಿ ಬಾರಿ ಸಿಇಟಿ ಶುಲ್ಕ ಪಾವತಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ವಿವರದ ಜೊತೆಗೆ ಯಾವ ಭಾಷೆಯಲ್ಲಿ ಪರೀಕ್ಷೆ ಬರೆಯುತ್ತೀರಿ ಎಂಬ ಅಂಶವನ್ನೂ ಕೇಳಲಾಗುತ್ತದೆ. ಆಗ ಒಬ್ಬ ವಿದ್ಯಾರ್ಥಿಯೂ ‘ಕನ್ನಡ’ ಎಂದು ನಮೂದಿಸುವುದಿಲ್ಲ ಎಂದು ಅವರು ಹೇಳಿದರು.</p>.<p>ಈಗ ಮತ್ತೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದ್ದು, ಇದಕ್ಕೆ ಪೂರಕವಾಗಿ ವಿಜ್ಞಾನ ವಿಷಯದ ಪಠ್ಯಪುಸ್ತಕಗಳನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ.</p>.<p>ಕನ್ನಡದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಾದರೆ ಪೂರಕ ಪಠ್ಯವಸ್ತು ಕನ್ನಡದಲ್ಲಿ ಲಭ್ಯ ಇರಬೇಕು ಮತ್ತು ಕಾಲೇಜುಗಳಲ್ಲಿ ಕನ್ನಡದಲ್ಲೇ ಬೋಧನೆ ಮಾಡಬೇಕು. </p>.<p>2017–18ನೇ ಸಾಲಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪಿಸಿಎಂಬಿ (ಭೌತ ವಿಜ್ಞಾನ, ರಸಾಯನ ವಿಜ್ಞಾನ, ಗಣಿತ, ಜೀವ ವಿಜ್ಞಾನ) ವಿಷಯಗಳಿಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಪಠ್ಯಗಳನ್ನು ಅಳವಡಿಸಿಕೊಳ್ಳಲಾಗಿದ್ದು, ಇಂಗ್ಲಿಷ್ನಲ್ಲಿರುವ ಈ ಪಠ್ಯಗಳನ್ನು ಕನ್ನಡಕ್ಕೆ ಭಾಷಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.</p>.<p>ಮುಂದಿನ ಶೈಕ್ಷಣಿಕ ವರ್ಷ ಆರಂಭ ಆಗುವುದರೊಳಗೆ ಈ ಪಠ್ಯಗಳ ಭಾಷಾಂತರ ಪೂರ್ಣಗೊಂಡರೆ ವಿಜ್ಞಾನ ಕೋರ್ಸ್ಗಳನ್ನು ಕನ್ನಡದಲ್ಲಿ ಕಲಿಯಲು ವಿದ್ಯಾರ್ಥಿಗಳಿಗೆ ಅವಕಾಶ ಸಿಗಲಿದೆ. </p>.<p>2012–13ರಲ್ಲಿ ವಿಜ್ಞಾನ ವಿಷಯಗಳನ್ನು ಕನ್ನಡಕ್ಕೆ ಭಾಷಾಂತರಿಸಲು ಹಂಪಿ ಕನ್ನಡ ವಿಶ್ವವಿದ್ಯಾಲಯದೊಂದಿಗೆ ಮಾತುಕತೆ ನಡೆಸಲಾಗಿತ್ತು. ಆದರೆ, ಭಾಷಾಂತರಕ್ಕೆ ದರ ನಿಗದಿ ಮಾಡುವ ಸಂಬಂಧ ಗೊಂದಲ ಉಂಟಾಗಿ ಈ ಯೋಜನೆ ಕೈಗೂಡಲಿಲ್ಲ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಕೇಂದ್ರದಿಂದ ತಾರತಮ್ಯ: ಕೇರಳ ಆಕ್ಷೇಪ</strong><br /> <strong>ಕೊಚ್ಚಿ (ಪಿಟಿಐ): </strong>ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ಎನ್ಇಇಟಿ) ಮಲಯಾಳಂ ಭಾಷೆಯಲ್ಲಿ ಬರೆಯಲು ಅವಕಾಶ ನೀಡದೆ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತ್ತಲ ಆರೋಪಿಸಿದ್ದಾರೆ.</p>.<p>‘ಇದು ಕೇರಳದ ಜನರಿಗೆ ಮಾಡಿರುವ ಅನ್ಯಾಯ. ಈ ವಿಚಾರದ ಕುರಿತು ಕೂಡಲೇ ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಬೇಕು’ ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.</p>.<p>‘ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ನೀಡುವ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ. ಆದರೆ, ಇವುಗಳಲ್ಲಿ ಮಲಯಾಳಂ ಮತ್ತು ಕನ್ನಡವನ್ನು ಸೇರಿಸಿಲ್ಲ. ಇದು ತಾರತಮ್ಯ ನೀತಿಯಾಗಿದೆ. ಈ ಎರಡೂ ಭಾಷೆಗಳನ್ನು ಸೇರ್ಪಡೆಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.<br /> <br /> <strong>ನಮ್ಮಿಂದ ಲೋಪ ಆಗಿಲ್ಲ: ಸಿ.ಎಂ<br /> ಹುಬ್ಬಳ್ಳಿ:</strong> ‘ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು ಕನ್ನಡದಲ್ಲೇ ನಡೆಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ನಡೆಸಿದ್ದ ವಿಡಿಯೊ ಸಂವಾದದ ಸಂದರ್ಭದಲ್ಲಿ ರಾಜ್ಯದ ಅಧಿಕಾರಿಗಳು ಹೇಳಿದ್ದರು. ಆದರೂ ಕೇಂದ್ರ ಸರ್ಕಾರ ಕನ್ನಡವನ್ನು ಕೈಬಿಟ್ಟಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಇಲ್ಲಿ ಆಕ್ಷೇಪಿಸಿದರು.</p>.<p>‘ಈ ವಿಷಯದಲ್ಲಿ ರಾಜ್ಯ ಸರ್ಕಾರದಿಂದ ಯಾವುದೇ ಲೋಪ ಆಗಿಲ್ಲ’ ಎಂದರು.<br /> <br /> <strong>ಮುಖ್ಯಾಂಶಗಳು</strong><br /> * ವಿಜ್ಞಾನ ಪಠ್ಯಗಳು ಕನ್ನಡದಲ್ಲಿ ಇಲ್ಲ</p>.<p>* ಎನ್ಸಿಇಆರ್ಟಿ ಪಠ್ಯಗಳ ಭಾಷಾಂತರಕ್ಕೆ ಈ ತಿಂಗಳು ಹೊರಟ ಆದೇಶ<br /> * ಕನ್ನಡದಲ್ಲಿ ಬರೆಯಲು ವಿದ್ಯಾರ್ಥಿಗಳ ನಿರಾಸಕ್ತಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>