ಕಾನ್ಪುರ : ಅಜ್ಮಿರ್–ಸಿಯಾಲ್ದಾಹ್ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 43ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಕಾನ್ಪುರ ದೆಹಾತ್ ಜಿಲ್ಲೆಯ ರೂರಾ ರೈಲ್ವೆ ನಿಲ್ದಾಣದ ಸಮೀಪ ಬುಧವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ದುರಂತ ಸಂಭವಿಸಿದೆ.
ಕಾಲುವೆಯ ಸೇತುವೆ ಮೇಲೆ ಸಂಚರಿಸುತ್ತಿದ್ದ ಹದಿನೈದು ಬೋಗಿಗಳನ್ನು ಹೊಂದಿದ್ದ 12987 ಅಜ್ಮಿರ್–ಸಿಯಾಲ್ದಹ ಎಕ್ಸ್ಪ್ರೆಸ್ ರೈಲು ಹಳ್ಳಿ ತಪ್ಪಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ರೈಲ್ವೆ ಸಚಿವ ಸುರೇಶ್ ಪ್ರಭು, ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ.