ಆದರೆ, ಭಾರತದಲ್ಲಿ ಜನ ನೋಟು ಬದಲಾವಣೆ ಸಂಕಷ್ಟವನ್ನು ಸಹಿಸಿಕೊಂಡರು. ನೂರಾರು ಜನ ಸಾಲಿನಲ್ಲಿ ನಿಂತು ಜೀವ ಕಳೆದುಕೊಂಡರು. ಒಟ್ಟಿನಲ್ಲಿ ಭಾರತೀಯರು ಇದನ್ನು ಸಹಿಸಿಕೊಂಡರು. ನೆನಪಿರಲಿ, ಭಾರತದ ಪ್ರಧಾನಿ ಸರ್ವಾಧಿಕಾರಿ ಅಲ್ಲ; ಜನಪ್ರತಿನಿಧಿ. ತನ್ನ ಪ್ರಜೆಗಳು ತನ್ನ ನಿರ್ಧಾರದ ಕಾರಣವಾಗಿ ಜೀವ ಕಳೆದುಕೊಂಡಿದ್ದನ್ನು ದೇಶ ಸೇವೆಯೆಂದು ಅವರು ಭಾವಿಸಿದಂತೆ ಕಾಣುತ್ತಿದೆ.ಅರ್ಥವಾಗದ ಒದ್ದಾಟವಾಗಿದೆ ಎಂದು ದೇವನೂರ ಮಹಾದೇವ ಹೇಳಿದರು.