ನವದೆಹಲಿ: ಜಾತಿ, ಭಾಷೆ, ಧರ್ಮ ಹಾಗೂ ಸಮುದಾಯಗಳ ಹೆಸರಲ್ಲಿ ಮತ ಯಾಚಿಸುವುದು ಕಾನೂನು ಬಾಹಿರ ಎಂದು ಸುಪ್ರೀಂಕೋರ್ಟ್ ಸೋಮವಾರ ತೀರ್ಪು ನೀಡಿದೆ.
ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ನೇತೃತ್ವದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ಈ ಮೂಲಕ 20 ವರ್ಷಗಳಷ್ಟು ಹಳೆಯ ‘ಹಿಂದುತ್ವ ಪ್ರಕರಣ’ದ ಐತಿಹಾಸಿಕ ತೀರ್ಪು ಹೊರಬಿದ್ದಿದೆ.
ಜಾತಿ, ಭಾಷೆ, ಧರ್ಮ ಹಾಗೂ ಸಮುದಾಯಗಳ ಆಧಾರದಲ್ಲಿ ಮತ ಯಾಚಿಸುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ತಪ್ಪು. ಈ ರೀತಿ ಮತ ಯಾಚಿಸುವ ಅಭ್ಯರ್ಥಿಯನ್ನು ಅನರ್ಹಗೊಳಿಸಬೇಕು ಎಂದು ತೀರ್ಪು ನೀಡಲಾಗಿದೆ.
ಚುನಾವಣಾ ಪ್ರಕ್ರಿಯೆ ಜಾತ್ಯತೀತವಾಗಿ ನಡೆಯಬೇಕು. ಧರ್ಮವನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನ್ಯಾಯಪೀಠ ತಿಳಿಸಿದೆ.
ಸುಪ್ರೀಂಕೋರ್ಟ್ನ ಈ ತೀರ್ಪು ಮುಂಬರುವ ಪಂಚರಾಜ್ಯಗಳ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ.