<p><strong>ನವದೆಹಲಿ: </strong>ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ಅವರನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.</p>.<p>ಅಲ್ಲದೆ ಬಿಸಿಸಿಐನ ಕಾರ್ಯದರ್ಶಿ ಸ್ಥಾನದಿಂದ ಅಜಯ್ ಶಿರ್ಕೆ ಅವರನ್ನು ವಜಾಗೊಳಿಸಲಾಗಿದೆ.<br /> <br /> ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.</p>.<p>ಲೋಧಾ ಸಮಿತಿ ವರದಿ ಆಧರಿಸಿ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ನೀಡಿದೆ.</p>.<p>ಬಿಸಿಸಿಐಗೆ ಹೊಸ ಆಡಳಿತಾಧಿಕಾರಿಗಳನ್ನು ನೇಮಿಸುವುದಾಗಿ ಹೇಳಿರುವ ನ್ಯಾಯಪೀಠ ಜನವರಿ 19ರಂದು ಈ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದೆ.<br /> <br /> ಬಿಸಿಸಿಐನ ಪದಾಧಿಕಾರಿಗಳ ಆಯ್ಕೆಗಾಗಿ ಹಿರಿಯ ವಕೀಲರಾದ ಫಾಲಿ ನಾರಿಮನ್ ಮತ್ತು ಗೋಪಾಲ್ ಸುಬ್ರಮಣಿಯನ್ ಅವರನ್ನು ಸುಪ್ರೀಂಕೋರ್ಟ್ ಅಮಿಕಸ್ ಕ್ಯೂರಿಗಳನ್ನಾಗಿ ನೇಮಿಸಿದೆ.<br /> <br /> ‘ಇದು ನನ್ನ ವೈಯಕ್ತಿಕ ಹೋರಾಟವಲ್ಲ. ನಾನು ಒಂದು ಸ್ವಾಯತ್ತ ಕ್ರೀಡಾ ಸಂಸ್ಥೆಯ ಪರವಾಗಿದ್ದೇನೆ. ನಿವೃತ್ತ ನ್ಯಾಯಮೂರ್ತಿಗಳು ಬಿಸಿಸಿಐಯನ್ನು ಉತ್ತಮವಾಗಿ ನಡೆಸುತ್ತಾರೆ ಎಂದು ಸುಪ್ರೀಂಕೋರ್ಟ್ ಭಾವಿಸಿದರೆ ಅವರಿಗೆ ಒಳ್ಳೆಯದಾಗಲಿ. ಅವರು ಈ ಕೆಲಸವನ್ನು ಉತ್ತಮವಾಗಿ ನಿಭಾಯಿಸುತ್ತಾರೆ ಎಂಬ ನಂಬಿಕೆ ಇದೆ’ ಎಂದು ಅನುರಾಗ್ ಠಾಕೂರ್ ಪ್ರತಿಕ್ರಿಯಿಸಿದ್ದಾರೆ.<br /> <br /> <strong>ಸುಳ್ಳು ಸಾಕ್ಷ್ಯಆರೋಪ</strong><br /> ಬಿಸಿಸಿಐ ಆಡಳಿತದಲ್ಲಿ ಸುಧಾರಣೆ ತರಲು ಲೋಧಾ ಸಮಿತಿ ಮಾಡಿದ್ದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ವಿಷಯಕ್ಕೆ ಸಂಬಂಧಿಸಿದಂತೆ ಅನುರಾಗ್ ಠಾಕೂರ್ ಅವರು ಸುಳ್ಳು ಸಾಕ್ಷ್ಯ ಸಲ್ಲಿಸಿದ ಆರೋಪ ಎದುರಿಸುತ್ತಿದ್ದರು.</p>.<p>ಶಿಫಾರಸು ಅನುಷ್ಠಾನ ಮಾಡುವ ವಿಷಯದ ಬಗ್ಗೆ ಅಂತರ ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಖ್ಯಸ್ಥ ಶಶಾಂಕ್ ಮನೋಹರ್ ಅವರ ಜೊತೆ ಚರ್ಚಿಸುವಂತೆ ಸುಪ್ರೀಂಕೋರ್ಟ್ ಅನುರಾಗ್ ಅವರಿಗೆ ಸೂಚಿಸಿತ್ತು. ಈ ಆದೇಶ ಪಾಲಿಸಿರುವುದಾಗಿ ಅನುರಾಗ್ ಅವರು ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು.</p>.<p>ಅನುರಾಗ್ ಅವರು ಶಶಾಂಕ್ ಜೊತೆ ಯಾವ ವಿಷಯವನ್ನೂ ಚರ್ಚಿಸದೇ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಸುಪ್ರೀಂಕೋರ್ಟ್ ಸಂಶಯ ವ್ಯಕ್ತಪಡಿಸಿತ್ತು.<br /> <br /> ‘ಬಿಸಿಸಿಐಗೆ ಆಡಳಿತಾಧಿಕಾರಿಗಳು ಬರುತ್ತಾರೆ, ಹೋಗುತ್ತಾರೆ. ಅದರಿಂದ ಅಂತಿಮವಾಗಿ ಕ್ರಿಕೆಟ್ಗೆ ಪ್ರಯೋಜನವಾಗಬೇಕು’ ಎಂದು ನಿವೃತ್ತ ನ್ಯಾಯಮೂರ್ತಿ ಆರ್.ಎಂ.ಲೋಧಾ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್ ಅವರನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.</p>.<p>ಅಲ್ಲದೆ ಬಿಸಿಸಿಐನ ಕಾರ್ಯದರ್ಶಿ ಸ್ಥಾನದಿಂದ ಅಜಯ್ ಶಿರ್ಕೆ ಅವರನ್ನು ವಜಾಗೊಳಿಸಲಾಗಿದೆ.<br /> <br /> ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಠಾಕೂರ್ ಅವರ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ.</p>.<p>ಲೋಧಾ ಸಮಿತಿ ವರದಿ ಆಧರಿಸಿ ಸುಪ್ರೀಂಕೋರ್ಟ್ ಈ ಮಹತ್ವದ ಆದೇಶ ನೀಡಿದೆ.</p>.<p>ಬಿಸಿಸಿಐಗೆ ಹೊಸ ಆಡಳಿತಾಧಿಕಾರಿಗಳನ್ನು ನೇಮಿಸುವುದಾಗಿ ಹೇಳಿರುವ ನ್ಯಾಯಪೀಠ ಜನವರಿ 19ರಂದು ಈ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದೆ.<br /> <br /> ಬಿಸಿಸಿಐನ ಪದಾಧಿಕಾರಿಗಳ ಆಯ್ಕೆಗಾಗಿ ಹಿರಿಯ ವಕೀಲರಾದ ಫಾಲಿ ನಾರಿಮನ್ ಮತ್ತು ಗೋಪಾಲ್ ಸುಬ್ರಮಣಿಯನ್ ಅವರನ್ನು ಸುಪ್ರೀಂಕೋರ್ಟ್ ಅಮಿಕಸ್ ಕ್ಯೂರಿಗಳನ್ನಾಗಿ ನೇಮಿಸಿದೆ.<br /> <br /> ‘ಇದು ನನ್ನ ವೈಯಕ್ತಿಕ ಹೋರಾಟವಲ್ಲ. ನಾನು ಒಂದು ಸ್ವಾಯತ್ತ ಕ್ರೀಡಾ ಸಂಸ್ಥೆಯ ಪರವಾಗಿದ್ದೇನೆ. ನಿವೃತ್ತ ನ್ಯಾಯಮೂರ್ತಿಗಳು ಬಿಸಿಸಿಐಯನ್ನು ಉತ್ತಮವಾಗಿ ನಡೆಸುತ್ತಾರೆ ಎಂದು ಸುಪ್ರೀಂಕೋರ್ಟ್ ಭಾವಿಸಿದರೆ ಅವರಿಗೆ ಒಳ್ಳೆಯದಾಗಲಿ. ಅವರು ಈ ಕೆಲಸವನ್ನು ಉತ್ತಮವಾಗಿ ನಿಭಾಯಿಸುತ್ತಾರೆ ಎಂಬ ನಂಬಿಕೆ ಇದೆ’ ಎಂದು ಅನುರಾಗ್ ಠಾಕೂರ್ ಪ್ರತಿಕ್ರಿಯಿಸಿದ್ದಾರೆ.<br /> <br /> <strong>ಸುಳ್ಳು ಸಾಕ್ಷ್ಯಆರೋಪ</strong><br /> ಬಿಸಿಸಿಐ ಆಡಳಿತದಲ್ಲಿ ಸುಧಾರಣೆ ತರಲು ಲೋಧಾ ಸಮಿತಿ ಮಾಡಿದ್ದ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವ ವಿಷಯಕ್ಕೆ ಸಂಬಂಧಿಸಿದಂತೆ ಅನುರಾಗ್ ಠಾಕೂರ್ ಅವರು ಸುಳ್ಳು ಸಾಕ್ಷ್ಯ ಸಲ್ಲಿಸಿದ ಆರೋಪ ಎದುರಿಸುತ್ತಿದ್ದರು.</p>.<p>ಶಿಫಾರಸು ಅನುಷ್ಠಾನ ಮಾಡುವ ವಿಷಯದ ಬಗ್ಗೆ ಅಂತರ ರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಖ್ಯಸ್ಥ ಶಶಾಂಕ್ ಮನೋಹರ್ ಅವರ ಜೊತೆ ಚರ್ಚಿಸುವಂತೆ ಸುಪ್ರೀಂಕೋರ್ಟ್ ಅನುರಾಗ್ ಅವರಿಗೆ ಸೂಚಿಸಿತ್ತು. ಈ ಆದೇಶ ಪಾಲಿಸಿರುವುದಾಗಿ ಅನುರಾಗ್ ಅವರು ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಸಿದ್ದರು.</p>.<p>ಅನುರಾಗ್ ಅವರು ಶಶಾಂಕ್ ಜೊತೆ ಯಾವ ವಿಷಯವನ್ನೂ ಚರ್ಚಿಸದೇ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಸುಪ್ರೀಂಕೋರ್ಟ್ ಸಂಶಯ ವ್ಯಕ್ತಪಡಿಸಿತ್ತು.<br /> <br /> ‘ಬಿಸಿಸಿಐಗೆ ಆಡಳಿತಾಧಿಕಾರಿಗಳು ಬರುತ್ತಾರೆ, ಹೋಗುತ್ತಾರೆ. ಅದರಿಂದ ಅಂತಿಮವಾಗಿ ಕ್ರಿಕೆಟ್ಗೆ ಪ್ರಯೋಜನವಾಗಬೇಕು’ ಎಂದು ನಿವೃತ್ತ ನ್ಯಾಯಮೂರ್ತಿ ಆರ್.ಎಂ.ಲೋಧಾ ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>