<div> <strong>ಬಾಗ್ದಾದ್:</strong> ನಗರದ ಜನನಿಬಿಡ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಬಾಂಬ್ ಆತ್ಮಾಹುತಿ ದಾಳಿಯಲ್ಲಿ 36 ಮಂದಿ ಸಾವಿಗೀಡಾಗಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.<div> </div><div> ರಾಜಧಾನಿಯ ಈಶಾನ್ಯಭಾಗದಲ್ಲಿರುವ ಶಿಯಾ ಸಮುದಾಯದವರು ಬಹುಸಂಖ್ಯೆಯಲ್ಲಿರುವ ಸರ್ದ್ ಪಟ್ಟಣದಲ್ಲಿ ಕೆಲಸಕ್ಕಾಗಿ ಕಾಯುತ್ತಿದ್ದ </div><div> ಕೂಲಿಕಾರ್ಮಿಕರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ.</div><div> </div><div> ದಾಳಿಯಲ್ಲಿ 36ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ದಾಳಿ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಗೊಂಡಿತು. ದಾಳಿಯನ್ನು ‘ಹುತಾತ್ಮ ಕಾರ್ಯಾಚರಣೆ’ ಎಂದು ಐಎಸ್ನ ‘ಅಮಕ್’ ಸುದ್ದಿಸಂಸ್ಥೆ ತಿಳಿಸಿದೆ.</div><div> </div><div> ಶನಿವಾರ ಬಾಗ್ದಾದ್ನ ಪ್ರಮುಖ ಮಾರುಕಟ್ಟೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 27 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯನ್ನು ಐಎಸ್ ನಡೆಸಿತ್ತು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div> <strong>ಬಾಗ್ದಾದ್:</strong> ನಗರದ ಜನನಿಬಿಡ ಪ್ರದೇಶದಲ್ಲಿ ಸೋಮವಾರ ನಡೆದ ಕಾರು ಬಾಂಬ್ ಆತ್ಮಾಹುತಿ ದಾಳಿಯಲ್ಲಿ 36 ಮಂದಿ ಸಾವಿಗೀಡಾಗಿದ್ದಾರೆ. ಇಸ್ಲಾಮಿಕ್ ಸ್ಟೇಟ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.<div> </div><div> ರಾಜಧಾನಿಯ ಈಶಾನ್ಯಭಾಗದಲ್ಲಿರುವ ಶಿಯಾ ಸಮುದಾಯದವರು ಬಹುಸಂಖ್ಯೆಯಲ್ಲಿರುವ ಸರ್ದ್ ಪಟ್ಟಣದಲ್ಲಿ ಕೆಲಸಕ್ಕಾಗಿ ಕಾಯುತ್ತಿದ್ದ </div><div> ಕೂಲಿಕಾರ್ಮಿಕರನ್ನು ಗುರಿಯಾಗಿರಿಸಿಕೊಂಡು ಈ ದಾಳಿ ನಡೆಸಲಾಗಿದೆ.</div><div> </div><div> ದಾಳಿಯಲ್ಲಿ 36ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು. ದಾಳಿ ನಡೆದ ಕೆಲವೇ ಕ್ಷಣಗಳಲ್ಲಿ ಸ್ಥಳದಲ್ಲಿ ದಟ್ಟವಾದ ಹೊಗೆ ಆವರಿಸಿದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಗೊಂಡಿತು. ದಾಳಿಯನ್ನು ‘ಹುತಾತ್ಮ ಕಾರ್ಯಾಚರಣೆ’ ಎಂದು ಐಎಸ್ನ ‘ಅಮಕ್’ ಸುದ್ದಿಸಂಸ್ಥೆ ತಿಳಿಸಿದೆ.</div><div> </div><div> ಶನಿವಾರ ಬಾಗ್ದಾದ್ನ ಪ್ರಮುಖ ಮಾರುಕಟ್ಟೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ 27 ಮಂದಿ ಸಾವನ್ನಪ್ಪಿದ್ದರು. ಈ ದಾಳಿಯನ್ನು ಐಎಸ್ ನಡೆಸಿತ್ತು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>