ರಾಜ್ಯದಲ್ಲಿ ಖಾಸಗಿ ಕ್ಷೇತ್ರದ ‘ಸಿ’ ಮತ್ತು ‘ಡಿ’ ವರ್ಗದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 100 ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ 1961ರ ಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮಗಳಿಗೆ ತಿದ್ದುಪಡಿ ಕರಡನ್ನು ಕಾರ್ಮಿಕ ಇಲಾಖೆ ಬಿಡುಗಡೆ ಮಾಡಿದೆ. ಇದರಿಂದ ಕನ್ನಡಿಗರಿಗೆ ನಿಜಕ್ಕೂ ಅನುಕೂಲವಾಗುತ್ತದೆಯೆ? ಆರ್ಥಿಕ ಅಭಿವೃದ್ಧಿಗಾಗಿ ಶ್ರಮ ಹಾಗೂ ಬಂಡವಾಳದ ಮುಕ್ತ ಚಲನೆಗೆ ಅವಕಾಶ ಇರಬೇಕೆಂಬ ‘ಆರ್ಥಿಕ ತತ್ವ’ ಪಾಲನೆಗೆ ತೊಡಕಾಗದೇ? ಈ ಬೆಳವಣಿಗೆಯನ್ನು ಉದ್ಯಮಿಗಳು ಹೇಗೆ ವಿಶ್ಲೇಷಿಸುತ್ತಾರೆ? ಹೊರ ರಾಜ್ಯಗಳ ಕಾರ್ಮಿಕರೂ ಈ ಉದ್ದಿಮೆಗಳ ಬೆಳವಣಿಗೆಯಲ್ಲಿ ಮುಖ್ಯ ಪಾಲು ಹೊಂದಿರುವುದರಿಂದ, ಹೊಸ ನೀತಿಯಿಂದ ಆಗಬಹುದಾದ ಪಲ್ಲಟಗಳೇನು?
***
ವಿಸ್ತರಿಸುತ್ತಿರುವ ಜಾಗತಿಕ ಮಾರುಕಟ್ಟೆ, ವಿದೇಶಿ ಬಂಡವಾಳದ ನೇರ ಹೂಡಿಕೆ, ಆನ್ಲೈನ್ ವಹಿವಾಟು, ಬಂಡವಾಳ ಆಕರ್ಷಣೆಗೆ ರಾಜ್ಯಗಳ ಮಧ್ಯೆ ಪೈಪೋಟಿ ಹೆಚ್ಚುತ್ತಿರುವ ಆರ್ಥಿಕ ಸ್ಥಿತ್ಯಂತರದ ಕಾಲದಲ್ಲಿ, ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕೊಡಿಸುವ ‘ದಿಟ್ಟ ಹೆಜ್ಜೆ’ ಇಡಲು ರಾಜ್ಯ ಸರ್ಕಾರ ಮುಂದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.