<p><strong>ನವದೆಹಲಿ: </strong>ನೋಟು ರದ್ದತಿ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಉರ್ಜಿತ್ ಪಟೇಲ್ ಅವರಿಗೆ ನೋಟಿಸ್ ನೀಡಿದ್ದು, ಇದೇ 28ರಂದು ತನ್ನ ಮುಂದೆ ಹಾಜರಾಗುವಂತೆ ಸೂಚಿಸಿದೆ.<br /> <br /> ನೋಟು ರದ್ದತಿ ನಿರ್ಧಾರ ಪ್ರಕ್ರಿಯೆ ಮತ್ತು ಅದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಕಾಂಗ್ರೆಸ್ ಸಂಸದ ಕೆ.ವಿ. ಥಾಮಸ್ ನೇತೃತ್ವದ ಸಮಿತಿ ವಿವರ ಕೇಳಲಿದೆ. ಸಮಿತಿಯ ಪ್ರಶ್ನೆಗಳಿಗೆ ಉತ್ತರಿಸಲು ಉರ್ಜಿತ್ ಪಟೇಲ್ ಈಗಾಗಲೇ ತಯಾರಿ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> ಹಣಕಾಸು ನಿಯಮಾವಳಿಗಳ ಸಂಸದೀಯ ಸಮಿತಿಯೂ ಈ ಸಂಬಂಧ ಉರ್ಜಿತ್ ಅವರಿಗೆ ನೋಟಿಸ್ ನೀಡಿತ್ತು.</p>.<p><strong>ಸಮಿತಿ ಕೇಳಬಹುದಾದ ಪ್ರಶ್ನೆಗಳು</strong><br /> * ನೋಟು ರದ್ದತಿ ವಿಚಾರದಲ್ಲಿ ಆರ್ಬಿಐ ಆಡಳಿತ ಮಂಡಳಿಯು ಸರ್ಕಾರ ಹೇಳಿದಂತೆ ಕೇಳಿದೆ ಎಂಬ ಆರೋಪಗಳಿವೆ. ಈ ಬಗ್ಗೆ ವಿವರಣೆ ನೀಡಿ.<br /> * ನೋಟು ರದ್ದತಿ ಕ್ರಮವನ್ನು ತರಾತುರಿಯಲ್ಲಿ ಜಾರಿಗೆ ತಂದಿದ್ದು ಏಕೆ?<br /> * ಕ್ರಮ ಜಾರಿಗೂ ಮುನ್ನ ಆರ್ಬಿಐ ಮಂಡಳಿ ಸಭೆ ಸೇರಿತ್ತೆ? ಸಭೆ ಸೇರಿದ್ದರೆ, ಸಭೆ ನಡೆದದ್ದು ಯಾವಾಗ?<br /> * ಚಲಾವಣೆಯಿಂದ ಹಿಂದಕ್ಕೆ ಪಡೆದ ಹಣದ ಮೊತ್ತದ ಮಾಹಿತಿ ನೀಡಿ. ರದ್ದಾದ ನೋಟುಗಳೆಷ್ಟು? ಈವರೆಗೆ ಹಳೆಯ ನೋಟುಗಳಲ್ಲಿ ಬ್ಯಾಂಕ್ಗಳಲ್ಲಿ ಜಮೆಯಾದ ಹಣ ಎಷ್ಟು?<br /> * ಇಡೀ ಪ್ರಕ್ರಿಯೆ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ನೀಡಲು ಆರ್ಬಿಐ ನಿರಾಕರಿಸುತ್ತಿರುವುದು ಏಕೆ?<br /> * ಬ್ಯಾಂಕ್ಗಳಿಂದ ಹಣ ಪಡೆಯಲು ಮಿತಿ ಹೇರುವ ಅಧಿಕಾರ ಆರ್ಬಿಐಗೆ ಬಂದಿದ್ದು ಎಲ್ಲಿಂದ? ಈ ಬಗ್ಗೆ ಯಾವುದೇ ಕಾನೂನುಗಳಿಲ್ಲ. ಹೀಗಿದ್ದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡ ಆರೋಪದಲ್ಲಿ ನಿಮ್ಮನ್ನು ವಿಚಾರಣೆಗೆ ಏಕೆ ಒಳಪಡಿಸಬಾರದು? ನಿಮ್ಮನ್ನು ವಜಾ ಮಾಡಬಾರದೇಕೆ?<br /> * ಆರ್ಬಿಐ ಪ್ರತಿದಿನ ಒಂದೊಂದು ನಿಯಮಗಳನ್ನು ಜಾರಿ ಮಾಡಿದ್ದೇಕೆ?<br /> * ಜನರ ಬೆರಳಿಗೆ ಅಳಿಸಲಾಗದ ಶಾಯಿಯಿಂದ ಗುರುತು ಮಾಡುವ ಮತ್ತು ಮದುವೆಗೆ ಹಣ ಪಡೆದುಕೊಳ್ಳಲು ಮಿತಿ ಹೇರುವ ಉಪಾಯಗಳನ್ನು ಕೊಟ್ಟ ಅಧಿಕಾರಿಗಳು ಯಾರು?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ನೋಟು ರದ್ದತಿ ಸಂಬಂಧ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಉರ್ಜಿತ್ ಪಟೇಲ್ ಅವರಿಗೆ ನೋಟಿಸ್ ನೀಡಿದ್ದು, ಇದೇ 28ರಂದು ತನ್ನ ಮುಂದೆ ಹಾಜರಾಗುವಂತೆ ಸೂಚಿಸಿದೆ.<br /> <br /> ನೋಟು ರದ್ದತಿ ನಿರ್ಧಾರ ಪ್ರಕ್ರಿಯೆ ಮತ್ತು ಅದರಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಕಾಂಗ್ರೆಸ್ ಸಂಸದ ಕೆ.ವಿ. ಥಾಮಸ್ ನೇತೃತ್ವದ ಸಮಿತಿ ವಿವರ ಕೇಳಲಿದೆ. ಸಮಿತಿಯ ಪ್ರಶ್ನೆಗಳಿಗೆ ಉತ್ತರಿಸಲು ಉರ್ಜಿತ್ ಪಟೇಲ್ ಈಗಾಗಲೇ ತಯಾರಿ ಆರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.<br /> ಹಣಕಾಸು ನಿಯಮಾವಳಿಗಳ ಸಂಸದೀಯ ಸಮಿತಿಯೂ ಈ ಸಂಬಂಧ ಉರ್ಜಿತ್ ಅವರಿಗೆ ನೋಟಿಸ್ ನೀಡಿತ್ತು.</p>.<p><strong>ಸಮಿತಿ ಕೇಳಬಹುದಾದ ಪ್ರಶ್ನೆಗಳು</strong><br /> * ನೋಟು ರದ್ದತಿ ವಿಚಾರದಲ್ಲಿ ಆರ್ಬಿಐ ಆಡಳಿತ ಮಂಡಳಿಯು ಸರ್ಕಾರ ಹೇಳಿದಂತೆ ಕೇಳಿದೆ ಎಂಬ ಆರೋಪಗಳಿವೆ. ಈ ಬಗ್ಗೆ ವಿವರಣೆ ನೀಡಿ.<br /> * ನೋಟು ರದ್ದತಿ ಕ್ರಮವನ್ನು ತರಾತುರಿಯಲ್ಲಿ ಜಾರಿಗೆ ತಂದಿದ್ದು ಏಕೆ?<br /> * ಕ್ರಮ ಜಾರಿಗೂ ಮುನ್ನ ಆರ್ಬಿಐ ಮಂಡಳಿ ಸಭೆ ಸೇರಿತ್ತೆ? ಸಭೆ ಸೇರಿದ್ದರೆ, ಸಭೆ ನಡೆದದ್ದು ಯಾವಾಗ?<br /> * ಚಲಾವಣೆಯಿಂದ ಹಿಂದಕ್ಕೆ ಪಡೆದ ಹಣದ ಮೊತ್ತದ ಮಾಹಿತಿ ನೀಡಿ. ರದ್ದಾದ ನೋಟುಗಳೆಷ್ಟು? ಈವರೆಗೆ ಹಳೆಯ ನೋಟುಗಳಲ್ಲಿ ಬ್ಯಾಂಕ್ಗಳಲ್ಲಿ ಜಮೆಯಾದ ಹಣ ಎಷ್ಟು?<br /> * ಇಡೀ ಪ್ರಕ್ರಿಯೆ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ನೀಡಲು ಆರ್ಬಿಐ ನಿರಾಕರಿಸುತ್ತಿರುವುದು ಏಕೆ?<br /> * ಬ್ಯಾಂಕ್ಗಳಿಂದ ಹಣ ಪಡೆಯಲು ಮಿತಿ ಹೇರುವ ಅಧಿಕಾರ ಆರ್ಬಿಐಗೆ ಬಂದಿದ್ದು ಎಲ್ಲಿಂದ? ಈ ಬಗ್ಗೆ ಯಾವುದೇ ಕಾನೂನುಗಳಿಲ್ಲ. ಹೀಗಿದ್ದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡ ಆರೋಪದಲ್ಲಿ ನಿಮ್ಮನ್ನು ವಿಚಾರಣೆಗೆ ಏಕೆ ಒಳಪಡಿಸಬಾರದು? ನಿಮ್ಮನ್ನು ವಜಾ ಮಾಡಬಾರದೇಕೆ?<br /> * ಆರ್ಬಿಐ ಪ್ರತಿದಿನ ಒಂದೊಂದು ನಿಯಮಗಳನ್ನು ಜಾರಿ ಮಾಡಿದ್ದೇಕೆ?<br /> * ಜನರ ಬೆರಳಿಗೆ ಅಳಿಸಲಾಗದ ಶಾಯಿಯಿಂದ ಗುರುತು ಮಾಡುವ ಮತ್ತು ಮದುವೆಗೆ ಹಣ ಪಡೆದುಕೊಳ್ಳಲು ಮಿತಿ ಹೇರುವ ಉಪಾಯಗಳನ್ನು ಕೊಟ್ಟ ಅಧಿಕಾರಿಗಳು ಯಾರು?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>