<p><strong>ಚೆನ್ನೈ</strong>: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ನಿಷೇಧವನ್ನು ವಿರೋಧಿಸಿರುವ ನಟ ಕಮಲ್ ಹಾಸನ್, ಜಲ್ಲಿಕಟ್ಟು ಸ್ಪರ್ಧೆಯಿಂದಾಗಿ ಪ್ರಾಣಿ ಹಿಂಸೆ ನಡೆಯುತ್ತದೆ ಎಂದು ವಾದಿಸುವವರು ಬಿರಿಯಾನಿಯನ್ನೂ ನಿಷೇಧಿಸಬೇಕು ಎಂದಿದ್ದಾರೆ.</p>.<p>ಚೆನ್ನೈನಲ್ಲಿ ಇಂಡಿಯ ಟುಡೇ ಸೌತ್ ಕಾನ್ಕ್ಲೇವ್ ನಲ್ಲಿ ಮಾತನಾಡಿದ ಕಮಲ್ ಹಾಸನ್ ,ತಮಿಳುನಾಡಿನ ಸಾಂಸ್ಕೃತಿಕ ಕ್ರೀಡೆಯಾಗಿದೆ ಜಲ್ಲಿಕಟ್ಟು, ನೀವು ಜಲ್ಲಿಕಟ್ಟು ನಿಷೇಧಿಸುವುದಾದರೆ, ಬಿರಿಯಾನಿ ಕೂಡಾ ನಿಷೇಧಿಸಿ. ನಾನು ಜಲ್ಲಿಕಟ್ಟು ಸ್ಪರ್ಧೆಯ ದೊಡ್ಡ ಅಭಿಮಾನಿ. ಹಲವಾರು ಬಾರಿ ನಾನು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದ್ದಾರೆ.</p>.<p>ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ ಎಂದು 2014ರಲ್ಲಿ ಸುಪ್ರೀಂಕೋರ್ಟ್ ಪ್ರಸ್ತುತ ಸ್ಪರ್ಧೆಯನ್ನು ನಿಷೇಧಿಸಿತ್ತು.</p>.<p>ಈ ಹಿಂದೆಯೂ ಕಮಲ್ ಹಾಸನ್ ಜಲ್ಲಿಕಟ್ಟು ಸ್ಪರ್ಧೆ ನಿಷೇಧದ ವಿರುದ್ಧ ಮಾತೆತ್ತಿದ್ದರು.</p>.<p>ಸ್ಪೇನ್ನ ಗೂಳಿ ಕಾಳಗ ಮತ್ತು ಜಲ್ಲಿಕಟ್ಟುವಿನ ನಡುವೆ ಯಾವುದೇ ಸಾಮ್ಯತೆಗಳಿಲ್ಲ. ಸ್ಪೇನ್ನಲ್ಲಿ ಗೂಳಿಗಳಿಗೆ ಹಿಂಸೆ ಮಾಡಿ ಅವುಗಳನ್ನು ಹತ್ಯೆ ಮಾಡಲಾಗುತ್ತಿದೆ. ಆದರೆ ತಮಿಳುನಾಡಿನಲ್ಲಿ ಗೂಳಿಗಳನ್ನು ದೇವರಂತೆ ಪೂಜಿಸಲಾಗುತ್ತದೆ.</p>.<p>ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗೂಳಿಗಳ ಕೊಂಬು ಮುರಿಯುವುದಾಗಲೀ ಮಾಡುವುದಿಲ್ಲ. ಇಲ್ಲಿ ಅವುಗಳನ್ನು ಮಣಿಸಲಾಗುತ್ತದೆಯೇ ಹೊರತು ದೈಹಿಕ ಹಿಂಸೆ ನೀಡಲಾಗುವುದಿಲ್ಲ ಎಂದು ಕಮಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ನಿಷೇಧವನ್ನು ವಿರೋಧಿಸಿರುವ ನಟ ಕಮಲ್ ಹಾಸನ್, ಜಲ್ಲಿಕಟ್ಟು ಸ್ಪರ್ಧೆಯಿಂದಾಗಿ ಪ್ರಾಣಿ ಹಿಂಸೆ ನಡೆಯುತ್ತದೆ ಎಂದು ವಾದಿಸುವವರು ಬಿರಿಯಾನಿಯನ್ನೂ ನಿಷೇಧಿಸಬೇಕು ಎಂದಿದ್ದಾರೆ.</p>.<p>ಚೆನ್ನೈನಲ್ಲಿ ಇಂಡಿಯ ಟುಡೇ ಸೌತ್ ಕಾನ್ಕ್ಲೇವ್ ನಲ್ಲಿ ಮಾತನಾಡಿದ ಕಮಲ್ ಹಾಸನ್ ,ತಮಿಳುನಾಡಿನ ಸಾಂಸ್ಕೃತಿಕ ಕ್ರೀಡೆಯಾಗಿದೆ ಜಲ್ಲಿಕಟ್ಟು, ನೀವು ಜಲ್ಲಿಕಟ್ಟು ನಿಷೇಧಿಸುವುದಾದರೆ, ಬಿರಿಯಾನಿ ಕೂಡಾ ನಿಷೇಧಿಸಿ. ನಾನು ಜಲ್ಲಿಕಟ್ಟು ಸ್ಪರ್ಧೆಯ ದೊಡ್ಡ ಅಭಿಮಾನಿ. ಹಲವಾರು ಬಾರಿ ನಾನು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ ಎಂದು ಹೇಳಿದ್ದಾರೆ.</p>.<p>ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಪ್ರಾಣಿ ಹಿಂಸೆ ನಡೆಯುತ್ತಿದೆ ಎಂದು 2014ರಲ್ಲಿ ಸುಪ್ರೀಂಕೋರ್ಟ್ ಪ್ರಸ್ತುತ ಸ್ಪರ್ಧೆಯನ್ನು ನಿಷೇಧಿಸಿತ್ತು.</p>.<p>ಈ ಹಿಂದೆಯೂ ಕಮಲ್ ಹಾಸನ್ ಜಲ್ಲಿಕಟ್ಟು ಸ್ಪರ್ಧೆ ನಿಷೇಧದ ವಿರುದ್ಧ ಮಾತೆತ್ತಿದ್ದರು.</p>.<p>ಸ್ಪೇನ್ನ ಗೂಳಿ ಕಾಳಗ ಮತ್ತು ಜಲ್ಲಿಕಟ್ಟುವಿನ ನಡುವೆ ಯಾವುದೇ ಸಾಮ್ಯತೆಗಳಿಲ್ಲ. ಸ್ಪೇನ್ನಲ್ಲಿ ಗೂಳಿಗಳಿಗೆ ಹಿಂಸೆ ಮಾಡಿ ಅವುಗಳನ್ನು ಹತ್ಯೆ ಮಾಡಲಾಗುತ್ತಿದೆ. ಆದರೆ ತಮಿಳುನಾಡಿನಲ್ಲಿ ಗೂಳಿಗಳನ್ನು ದೇವರಂತೆ ಪೂಜಿಸಲಾಗುತ್ತದೆ.</p>.<p>ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಗೂಳಿಗಳ ಕೊಂಬು ಮುರಿಯುವುದಾಗಲೀ ಮಾಡುವುದಿಲ್ಲ. ಇಲ್ಲಿ ಅವುಗಳನ್ನು ಮಣಿಸಲಾಗುತ್ತದೆಯೇ ಹೊರತು ದೈಹಿಕ ಹಿಂಸೆ ನೀಡಲಾಗುವುದಿಲ್ಲ ಎಂದು ಕಮಲ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>