ಬೆಂಗಳೂರು: ರಾಜ್ಯ ಸಾಹಿತ್ಯ ಅಕಾಡೆಮಿ ನನ್ನ 'ಬಹುವಚನ ಭಾರತ' ಕೃತಿಗೆ ಪ್ರಶಸ್ತಿ ನೀಡಿದೆ. ಅಕಾಡೆಮಿ ನನ್ನ ಬಗ್ಗೆ ತೋರಿದ ಗೌರವಕ್ಕೆ ನಾನು ಕೃತಜ್ಞ. ಆದರೆ, 2015ರಲ್ಲಿ ಸಾಹಿತಿಗಳು ತಮಗೆ ನೀಡಿದ ಪ್ರಶಸ್ತಿಗಳ ನಿರಾಕರಣೆ / ವಾಪಾಸಾತಿಗೆ ಯಾವ ಸನ್ನಿವೇಶ ಕಾರಣವಾಯಿತೋ, ಆ ಸನ್ನಿವೇಶ ಈಗ ಇನ್ನಷ್ಟು ಹದಗೆಟ್ಟಿದೆ. ಹಾಗಾಗಿ ಈ ಪ್ರಶಸ್ತಿಯನ್ನ ನಾನು ಸ್ವೀಕರಿಸಲಾರೆ ಎಂದು ಜಿ. ರಾಜಶೇಖರ್ ಅವರು ಹೇಳಿದ್ದಾರೆ.