ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸ್ವೀಕರಿಸಲಾರೆ : ಜಿ.ರಾಜಶೇಖರ್

Last Updated 11 ಜನವರಿ 2017, 8:21 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸಾಹಿತ್ಯ ಅಕಾಡೆಮಿ ನನ್ನ 'ಬಹುವಚನ ಭಾರತ' ಕೃತಿಗೆ ಪ್ರಶಸ್ತಿ ನೀಡಿದೆ. ಅಕಾಡೆಮಿ ನನ್ನ ಬಗ್ಗೆ ತೋರಿದ ಗೌರವಕ್ಕೆ ನಾನು ಕೃತಜ್ಞ. ಆದರೆ, 2015ರಲ್ಲಿ ಸಾಹಿತಿಗಳು ತಮಗೆ ನೀಡಿದ ಪ್ರಶಸ್ತಿಗಳ ನಿರಾಕರಣೆ / ವಾಪಾಸಾತಿಗೆ ಯಾವ ಸನ್ನಿವೇಶ  ಕಾರಣವಾಯಿತೋ, ಆ ಸನ್ನಿವೇಶ ಈಗ ಇನ್ನಷ್ಟು ಹದಗೆಟ್ಟಿದೆ. ಹಾಗಾಗಿ ಈ ಪ್ರಶಸ್ತಿಯನ್ನ ನಾನು ಸ್ವೀಕರಿಸಲಾರೆ ಎಂದು ಜಿ. ರಾಜಶೇಖರ್ ಅವರು ಹೇಳಿದ್ದಾರೆ.

ಈ ಬಗ್ಗೆ ಫೋನ್ ಮೂಲಕ 'ಪ್ರಜಾವಾಣಿ' ಜತೆ ಮಾತನಾಡಿದ ರಾಜಶೇಖರ್ ಅವರು 2015ರಲ್ಲಿ ಅಸಹನೆಯ ವಾತಾವರಣವಿತ್ತು.

ಈಗ ಪರಿಸ್ಥಿತಿ ಇನ್ನೂ ಹದಗೆಟ್ಟಿದೆ. ಮಾತ್ರವಲ್ಲದೆ ಭಿನ್ನಮತ ತಲೆ ಎತ್ತದಂತೆ ಮಾಡುತ್ತಿದ್ದಾರೆ. ಇದು ಅಸಹನೆಯ ಇನ್ನೊಂದು ಆವೃತ್ತಿ. ಈ ಪರಿಸ್ಥಿತಿ ಸರಿಹೋಗುತ್ತದೆ ಎಂಬ ಯಾವುದೇ ಆಶಾವಾದ ಇಲ್ಲ.  ಹಾಗಾಗಿ ನಾನು ಪ್ರಶಸ್ತಿಯನ್ನು ನಿರಾಕರಿಸುತ್ತಿದ್ದೇನೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT