ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾದಾಟ; ಹುಲಿ ಗಾಯ

Last Updated 13 ಜನವರಿ 2017, 7:15 IST
ಅಕ್ಷರ ಗಾತ್ರ
ಎಚ್.ಡಿ.ಕೋಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದಲ್ಲಿ ಕಾಡೆಮ್ಮೆ ಯೊಂದಿಗೆ ನಡೆದ ಕಾದಾಟದಲ್ಲಿ ಏಳು ವರ್ಷದ ಹುಲಿಯೊಂದು ಗಾಯಗೊಂಡಿ ರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
 
ಗಾಯಗೊಂಡಿದ್ದ ಹುಲಿಯನ್ನು ಮೊಳೆಯೂರು ಅರಣ್ಯ ವಲಯದ ಎಂ.ಸಿ.ತಳಲು ಬೀಟ್‌ನ ನುಗು ಜಲಾಶಯದ ಹಿನ್ನೀರಿನಲ್ಲಿ ಆರ್‌ಎಫ್‌ಒ ಹರೀಶ್ ಗಮನಿಸಿ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದರು.
 
ಸ್ಥಳಕ್ಕೆ ತೆರಳಿದ ಎಸಿಎಫ್ ಪರಮೇಶ್ ಮತ್ತು ಪಶುವೈದ್ಯ ಡಾ.ನಾಗರಾಜು ನೀರಿನಲ್ಲಿದ್ದ ಹುಲಿಗೆ ಅರಿವಳಿಕೆ ಮದ್ದನ್ನು ನೀಡಿ, ಪರೀಕ್ಷಿಸಿದಾಗ ಮುಂದಿನ ಬಲಗಾಲಿನ ಮೂಳೆ ಮುರಿದಿರುವುದು ದೃಢಪಟ್ಟಿದೆ. ‘ಪ್ರಥಮ ಚಿಕಿತ್ಸೆ ನೀಡಿ ಮೈಸೂರಿಗೆ ಕಳುಹಿಸಲಾಗಿದೆ. ಅಲ್ಲಿಂದ ಬನ್ನೇರುಘಟ್ಟಕ್ಕೆ ಸಾಗಿಸಲಾಗುವುದು’ ಎಂದು ಪಶುವೈದ್ಯ ಡಾ.ನಾಗರಾಜು ತಿಳಿಸಿದರು
 
ಆನೆ ಕಳೆಬರ ಪತ್ತೆ: ಹೆಡಿಯಾಲ ಅರಣ್ಯ ವಲಯದಲ್ಲಿ 25 ವರ್ಷದ ಹೆಣ್ಣಾನೆ ಮೂರು ದಿನಗಳ ಹಿಂದೆ ಮೃತಪಟ್ಟಿದೆ.
 
ಗಸ್ತಿನಲ್ಲಿದ್ದ ಸಿಬ್ಬಂದಿ ಗುರುವಾರ ಬೆಳಿಗ್ಗೆ ಆನೆ ಕಳೆಬರವನ್ನು ನೋಡಿ, ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಆರ್‌ಎಫ್‌ಓ ಪರಮೇಶ್‌ ಮತ್ತು ವೈದ್ಯ ನಾಗರಾಜು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕಳೆಬರವನ್ನು ಸುಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT