ಮಹಾಮನೆಯ ಮುಂಭಾಗದಲ್ಲಿ ಲಿಂಗಾಯತ ಧರ್ಮದ ಧ್ವಜಾರೋಹಣವನ್ನು ಕೂಡಲಸಂಗಮದ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ನೆರವೇರಿಸಿದರು. ಪೀಠಾಧ್ಯಕ್ಷೆ ಮಾತೆ ಮಹಾದೇವಿ, ಮಾತೆ ಗಂಗಾದೇವಿ, ಚನ್ನಬಸವಾನಂದ ಸ್ವಾಮೀಜಿ, ಮಾತೆ ಜ್ಞಾನೇಶ್ವರಿ, ಮಾತೆ ದಾನೇಶ್ವರಿ, ಬಸವ ಕುಮಾರ ಸ್ವಾಮೀಜಿ, ಸಿದ್ದರಾಮೇಶ್ವರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ಪ್ರಭುಲಿಂಗ ಸ್ವಾಮೀಜಿ, ಮಾತೆ ಬಸವರತ್ನಾ, ಮಾತೆ ಸತ್ಯಾದೇವಿ, ಮಾತೆ ಶಾಂತಾದೇವಿ ಪಾಲ್ಗೊಂಡಿದ್ದರು. ಆ ಬಳಿಕ ಗುರುವಂದನೆ ಕಾರ್ಯಕ್ರಮ ನಡೆಯಿತು.