ಶಿರಸಿ: ತಾಲ್ಲೂಕಿನ ಬನವಾಸಿ ಹೋಬಳಿಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ಬರಗಾಲ ಪರಿಹಾರವನ್ನು ಈ ಭಾಗದ ರೈತರಿಗೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಅವರಿಗೆ ಕಾಳಂಗಿ ಸೇವಾ ಸಹಕಾರಿ ಸಂಸ್ಥೆ ಅಧ್ಯಕ್ಷ ಭೈರವ ಕಾಮತ್ ಮನವಿ ಸಲ್ಲಿಸಿದರು.
ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಸಚಿವರನ್ನು ಭೇಟಿ ಮಾಡಿದ ಅವರು ಬದನಗೋಡ ಹಾಗೂ ಅಂಡಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ರೈತರ ಪ್ರಮುಖ ಬೆಳೆ ಭತ್ತವಾಗಿದೆ. ಹೆಚ್ಚಿನ ನೀರಾವರಿ ಸೌಲಭ್ಯ ಹೊಂದಿಲ್ಲದ ರೈತರು ಮಳೆಯನ್ನೇ ನಂಬಿ ಕೃಷಿ ಕಾರ್ಯ ನಡೆಸುತ್ತಿದ್ದಾರೆ. ಈ ವರ್ಷ ಆರಂಭದಲ್ಲಿ ಸುರಿದ ಮುಂಗಾರು ಮಳೆಗೆ ರೈತರು ಸಾಲ ಸೂಲ ಮಾಡಿ ಬೀತ್ತನೆ ಬೀಜ, ಗೋಬ್ಬರ ಖರೀದಿಸಿ ಬೀತ್ತನೆ ಕಾರ್ಯ ಮುಗಿಸಿ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು.