<p><strong>ಬೆಂಗಳೂರು: </strong>ಫ್ಲಿಪ್ಕಾರ್ಟ್ ಇ–ಕಾಮರ್ಸ್ ಸಂಸ್ಥೆ ತನ್ನ ಸಾಮಗ್ರಿ ವಿತರಿಸುವ ವ್ಯಕ್ತಿ (ಡೆಲಿವರಿ ಬಾಯ್ಸ್) ಗಳ ಹಿತಕ್ಕಾಗಿ ತುರ್ತು ಗುಂಡಿ ಸೇವೆ ಪ್ರಾರಂಭಿಸಿದೆ.<br /> <br /> ಈ ಸೇವೆಗೆ ಇತ್ತೀಚೆಗೆ ನಗರದ ವಿಜಯನಗರದಲ್ಲಿ ಹತ್ಯೆಗೀಡಾದ ಡೆಲಿವರಿ ಬಾಯ್ ನಂಜುಂಡಸ್ವಾಮಿ ಅವರ ಹೆಸರಿಡಲಾಗಿದೆ.<br /> <br /> ‘ಸಾಮಗ್ರಿಗಳ ವಿತರಣೆಗೆ ವಿವಿಧ ಪ್ರದೇಶಗಳಿಗೆ ತೆರಳುವ ಡೆಲಿವರಿ ಬಾಯ್ಸ್ಗಳ ಭದ್ರತೆ ದೃಷ್ಟಿಯಿಂದ ನಂಜುಂಡಸ್ವಾಮಿ ಹತ್ಯೆಯಾದ ಒಂದು ತಿಂಗಳ ಒಳಗಾಗಿ ಈ ಮಾದರಿ ಸೇವೆ ಅಭಿವೃದ್ಧಿಪಡಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ ತುರ್ತು ಸೇವೆ ಒದಗಿಸುವುದು ಇದರ ಉದ್ದೇಶವಾಗಿದೆ’ ಎಂದು ಫ್ಲಿಪ್ಕಾರ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತಿನ್ ಸೇಠ್ ಹೇಳಿದ್ದಾರೆ.</p>.<p>ಭಾರಿ ಬ್ಯಾಗುಗಳನ್ನು ಹೊತ್ತು ಹೊರನಡೆಯುವ ಕೆಲಸಗಾರರ ಬಳಿಯ ಫೋನ್ನಲ್ಲಿ ತುರ್ತು ಗುಂಡಿಯನ್ನು (ಪ್ಯಾನಿಕ್ ಬಟನ್) ಅಳವಡಿಸಲಾಗಿದೆ. ಇದಕ್ಕೆ ನಂಜುಂಡ ಎಂದು ಹೆಸರಿಡಲಾಗಿದೆ. <br /> <br /> ತುರ್ತು ಪರಿಸ್ಥಿತಿಯಲ್ಲಿ ಈ ಬಟನ್ ಒತ್ತಿದರೆ ತಕ್ಷಣವೇ ಹತ್ತಿರದ ಸೇವಾ ಕೇಂದ್ರಕ್ಕೆ ಎಸ್ಎಂಎಸ್, ಇ–ಮೇಲ್ ರವಾನೆಯಾಗುತ್ತದೆ. ಇದು ಫೋನಿನ ನೆಟ್ವರ್ಕ್ ಆಧಾರಿತ ಸೇವೆಯಾಗಿದೆ. ಭಾರತದ ಯಾವುದೇ ಭಾಗದಲ್ಲಿ ಇದನ್ನು ಬಳಸಬಹುದಾಗಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಫ್ಲಿಪ್ಕಾರ್ಟ್ ಇ–ಕಾಮರ್ಸ್ ಸಂಸ್ಥೆ ತನ್ನ ಸಾಮಗ್ರಿ ವಿತರಿಸುವ ವ್ಯಕ್ತಿ (ಡೆಲಿವರಿ ಬಾಯ್ಸ್) ಗಳ ಹಿತಕ್ಕಾಗಿ ತುರ್ತು ಗುಂಡಿ ಸೇವೆ ಪ್ರಾರಂಭಿಸಿದೆ.<br /> <br /> ಈ ಸೇವೆಗೆ ಇತ್ತೀಚೆಗೆ ನಗರದ ವಿಜಯನಗರದಲ್ಲಿ ಹತ್ಯೆಗೀಡಾದ ಡೆಲಿವರಿ ಬಾಯ್ ನಂಜುಂಡಸ್ವಾಮಿ ಅವರ ಹೆಸರಿಡಲಾಗಿದೆ.<br /> <br /> ‘ಸಾಮಗ್ರಿಗಳ ವಿತರಣೆಗೆ ವಿವಿಧ ಪ್ರದೇಶಗಳಿಗೆ ತೆರಳುವ ಡೆಲಿವರಿ ಬಾಯ್ಸ್ಗಳ ಭದ್ರತೆ ದೃಷ್ಟಿಯಿಂದ ನಂಜುಂಡಸ್ವಾಮಿ ಹತ್ಯೆಯಾದ ಒಂದು ತಿಂಗಳ ಒಳಗಾಗಿ ಈ ಮಾದರಿ ಸೇವೆ ಅಭಿವೃದ್ಧಿಪಡಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಿ ತುರ್ತು ಸೇವೆ ಒದಗಿಸುವುದು ಇದರ ಉದ್ದೇಶವಾಗಿದೆ’ ಎಂದು ಫ್ಲಿಪ್ಕಾರ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತಿನ್ ಸೇಠ್ ಹೇಳಿದ್ದಾರೆ.</p>.<p>ಭಾರಿ ಬ್ಯಾಗುಗಳನ್ನು ಹೊತ್ತು ಹೊರನಡೆಯುವ ಕೆಲಸಗಾರರ ಬಳಿಯ ಫೋನ್ನಲ್ಲಿ ತುರ್ತು ಗುಂಡಿಯನ್ನು (ಪ್ಯಾನಿಕ್ ಬಟನ್) ಅಳವಡಿಸಲಾಗಿದೆ. ಇದಕ್ಕೆ ನಂಜುಂಡ ಎಂದು ಹೆಸರಿಡಲಾಗಿದೆ. <br /> <br /> ತುರ್ತು ಪರಿಸ್ಥಿತಿಯಲ್ಲಿ ಈ ಬಟನ್ ಒತ್ತಿದರೆ ತಕ್ಷಣವೇ ಹತ್ತಿರದ ಸೇವಾ ಕೇಂದ್ರಕ್ಕೆ ಎಸ್ಎಂಎಸ್, ಇ–ಮೇಲ್ ರವಾನೆಯಾಗುತ್ತದೆ. ಇದು ಫೋನಿನ ನೆಟ್ವರ್ಕ್ ಆಧಾರಿತ ಸೇವೆಯಾಗಿದೆ. ಭಾರತದ ಯಾವುದೇ ಭಾಗದಲ್ಲಿ ಇದನ್ನು ಬಳಸಬಹುದಾಗಿದೆ ಎಂದು ಕಂಪೆನಿ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>