ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಇದೇ 25ರಿಂದ 27ರವರೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ 37ನೇ ರಾಜ್ಯ ಮಟ್ಟದ ಕೃಷಿ ಮೇಳ ಆಯೋ ಜಿಸಲಾಗಿದೆ.
ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿಹೊಳಿ ಕೃಷಿ ಮೇಳ ಉದ್ಘಾಟಿ ಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂ-ವಿಜ್ಞಾನ ಸಚಿವ ವಿನಯ್ ಕುಲಕರ್ಣಿ, ಮಾಜಿ ಮುಖ್ಯ ಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಮತ್ತು ಎಚ್.ಡಿ. ಕುಮಾರಸ್ವಾಮಿ, ಸಂ ಸದ ಸುರೇಶ್ ಅಂಗಡಿ ಶುಭಾಶಂಸನೆ ಮಾಡುವರು.
ಗ್ರಾಮೀಣ ಕ್ರೀಡೆಗಳು, ಜಾನುವಾರು ಪ್ರದರ್ಶನ, ವಿಚಾರಗೋಷ್ಠಿ, ತಜ್ಞರಿಂದ ಮಾಹಿತಿ, ಜನಪ್ರತಿನಿಧಿಗಳೊಂದಿಗೆ ಸಂದರ್ಶನ, ಪ್ರಾತ್ಯಕ್ಷಿಕೆ, ವಸ್ತು ಪ್ರದರ್ಶನ ಮೊದಲಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಇದೇ 27ರಂದು ಶುಕ್ರವಾರ ನಡೆ ಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವ ಹಿಸುವರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ರೇಷ್ಮೆ ಸಚಿವ ಮಂಜು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸುವರು.