ಪಟ್ಟಣದ ಮುಖ್ಯ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ಕಾರ್ಯಕರ್ತರು ಸರ್ವಜ್ಞ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಕೆಲಕಾಲ ರಸ್ತೆತಡೆ ನಡೆಸಿದರು. ನಂತರ ತಹಶೀಲ್ದಾರ್ ಎ.ವಿ.ಶಿಗ್ಗಾವಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
‘ಎಬಿವಿಪಿ ಕಾರ್ಯಕರ್ತ ಅಭಿಷೇಕ ಆತ್ಮಹತ್ಯೆಗೆ ಕಾಂಗ್ರೆಸ್ ಹಾಗೂ ಎನ್ಎಸ್ಯುಐ ಕಾರ್ಯಕರ್ತರು ಕಾರಣವಾಗಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಎಬಿವಿಪಿ ಕಾರ್ಯಕರ್ತರಾದ ವೆಂಕಟೇಶ ಡಾಂಗೆ, ಕಾರ್ತಿಕ್ ಯತ್ತಿನಹಳ್ಳಿ, ಬಸವರಾಜ ವಡೇ ಯನಪುರ, ವಿರೇಶ ದಿಕ್ಷೀತ್, ನಾಗ ರಾಜ ಹೊಸಮನಿ, ಪ್ರಶಾಂತ ಎಣ್ಣಿ, ಮಹೇಂದ್ರ ಡಿ.ಎಂ., ಇತರರಿದ್ದರು.