ಬಜೆಟ್ ಮಂಡನೆಯನ್ನು ಮುಂದೂಡಲು ಕಾನೂನಲ್ಲಿ ಇರುವ ಅವಕಾಶಗಳು ಮತ್ತು ಇತರ ಪುರಾವೆಗಳನ್ನು ಸಲ್ಲಿಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಕೀಲ ಎಂ. ಎಲ್. ಶರ್ಮಾ ಅವರಿಗೆ ಮುಖ್ಯ ನ್ಯಾಯಮೂರ್ತಿ ಜೆ. ಎಸ್. ಖೇಹರ್ ಮತ್ತು ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ ಅವರ ನ್ಯಾಯಪೀಠವು ತಿಳಿಸಿತ್ತು. ಅರ್ಜಿದಾರರು ಸಲ್ಲಿಸಿರುವ ಹೆಚ್ಚುವರಿ ಪ್ರಮಾಣ ಪತ್ರ ಮತ್ತು ಪುರಾವೆಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಲು ನ್ಯಾಯಪೀಠವು ಒಪ್ಪಿಕೊಂಡಿದೆ.