ಕೊಲ್ಕತ್ತ: ಭಾರತ ಈಗಾಗಲೇ ಸರಣಿ ವಶಪಡಿಸಿಕೊಂಡಿದ್ದು, ವೈಟ್ವಾಷ್ನಿಂದ ಪಾರಾಗಲು ಭಾನುವಾರ ಕೊಲ್ಕತ್ತದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.
ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿಗಳೆರಡನ್ನು ಭಾರತ ಗೆದ್ದುಕೊಂಡಿದೆ. ಎರಡನೇ ಏಕದಿನ ಪಂದ್ಯದಲ್ಲಿ ಯುವರಾಜ್ ಸಿಂಗ್, ಎಂಎಸ್ ದೋನಿ ಅವರ ಅಮೋಘ ಜೊತೆಯಾಟದಿಂದ ತಂಡ ಬೃಹತ್ ಮೊತ್ತ ಪೇರಿಸಿದ್ದ ಕಾರಣ 15 ರನ್ಗಳ ಅಂತರದಿಂದ ಭಾರತ ಗೆಲುವು ಸಾಧಿಸಿತ್ತು.