<p><strong>ನವದೆಹಲಿ</strong>: ಕಾಳಧನ, ಖೋಟಾನೋಟು, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಚಟುವಟಿಕೆ ನಿಗ್ರಹಗಳಿಗಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿತ್ತು. ಆದರೆ ನವೆಂಬರ್ 8 ಅಂದರೆ ನೋಟು ರದ್ದು ತೀರ್ಮಾನ ಜಾರಿಗೆ ಬಂದ ದಿನದಂದಿನಿಂದ ಡಿಸೆಂಬರ್ 30ರವರೆಗೆ ನಡೆದ ಐಟಿ ದಾಳಿಗಳಲ್ಲಿ ಖೋಟಾ ನೋಟುಗಳು ಪತ್ತೆಯಾಗಿಲ್ಲ ಎಂದು ವಿತ್ತ ಸಚಿವಾಲಯ ಹೇಳಿದೆ.</p>.<p>ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ (ಪಿಎಸಿ) ಸಲ್ಲಿಸಿದ ವರದಿಯಲ್ಲಿ ವಿತ್ತ ಸಚಿವಾಲಯ ಈ ವಿಷಯವನ್ನು ಹೇಳಿದೆ.</p>.<p>ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರ ನವೆಂಬರ್ 9ರಿಂದ ಜನವರಿ 4ರ ವರೆಗಿನ ಕಾಲಾವಧಿಯಲ್ಲಿ ಆದಾಯ ತೆರಿಗೆ ಇಲಾಖೆ ಒಟ್ಟು ₹474.37 ಕೋಟಿ ಮೊತ್ತದ ಹಳೆಯ ನೋಟು ಮತ್ತು ಹೊಸ ನೋಟುಗಳ ಕಾಳಧನವನ್ನು ವಶಪಡಿಸಿಕೊಂಡಿದೆ.</p>.<p>ಆದರೆ ಕಾಳಧನ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವ ವ್ಯಕ್ತಿಗಳು ಉಗ್ರ ಸಂಘಟನೆ ಅಥವಾ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ವಿತ್ತ ಸಚಿವಾಲಯ ತಮ್ಮ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಮಾಡಿದೆ.</p>.<p>ಏತನ್ಮಧ್ಯೆ, ಕಳೆದ ವರ್ಷಕ್ಕೆ ಹೋಲಿಸಿದರೆ ನೋಟು ರದ್ದತಿ ಜಾರಿಗೆ ಬಂದ ನಂತರ ದಾಖಲೆರಹಿತ ಆದಾಯ ಇದೆ ಎಂದು ಒಪ್ಪಿಕೊಂಡವರ ಸಂಖ್ಯೆಯಲ್ಲಿ ಶೇ.51 ಏರಿಕೆಯಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಕಾಳಧನ, ಖೋಟಾನೋಟು, ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಚಟುವಟಿಕೆ ನಿಗ್ರಹಗಳಿಗಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿತ್ತು. ಆದರೆ ನವೆಂಬರ್ 8 ಅಂದರೆ ನೋಟು ರದ್ದು ತೀರ್ಮಾನ ಜಾರಿಗೆ ಬಂದ ದಿನದಂದಿನಿಂದ ಡಿಸೆಂಬರ್ 30ರವರೆಗೆ ನಡೆದ ಐಟಿ ದಾಳಿಗಳಲ್ಲಿ ಖೋಟಾ ನೋಟುಗಳು ಪತ್ತೆಯಾಗಿಲ್ಲ ಎಂದು ವಿತ್ತ ಸಚಿವಾಲಯ ಹೇಳಿದೆ.</p>.<p>ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ (ಪಿಎಸಿ) ಸಲ್ಲಿಸಿದ ವರದಿಯಲ್ಲಿ ವಿತ್ತ ಸಚಿವಾಲಯ ಈ ವಿಷಯವನ್ನು ಹೇಳಿದೆ.</p>.<p>ಗರಿಷ್ಠ ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರ ನವೆಂಬರ್ 9ರಿಂದ ಜನವರಿ 4ರ ವರೆಗಿನ ಕಾಲಾವಧಿಯಲ್ಲಿ ಆದಾಯ ತೆರಿಗೆ ಇಲಾಖೆ ಒಟ್ಟು ₹474.37 ಕೋಟಿ ಮೊತ್ತದ ಹಳೆಯ ನೋಟು ಮತ್ತು ಹೊಸ ನೋಟುಗಳ ಕಾಳಧನವನ್ನು ವಶಪಡಿಸಿಕೊಂಡಿದೆ.</p>.<p>ಆದರೆ ಕಾಳಧನ ಪ್ರಕರಣದಲ್ಲಿ ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಂಡಿರುವ ವ್ಯಕ್ತಿಗಳು ಉಗ್ರ ಸಂಘಟನೆ ಅಥವಾ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ ಎಂದು ವಿತ್ತ ಸಚಿವಾಲಯ ತಮ್ಮ ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ವರದಿ ಮಾಡಿದೆ.</p>.<p>ಏತನ್ಮಧ್ಯೆ, ಕಳೆದ ವರ್ಷಕ್ಕೆ ಹೋಲಿಸಿದರೆ ನೋಟು ರದ್ದತಿ ಜಾರಿಗೆ ಬಂದ ನಂತರ ದಾಖಲೆರಹಿತ ಆದಾಯ ಇದೆ ಎಂದು ಒಪ್ಪಿಕೊಂಡವರ ಸಂಖ್ಯೆಯಲ್ಲಿ ಶೇ.51 ಏರಿಕೆಯಾಗಿದೆ ಎಂದು ವಿತ್ತ ಸಚಿವಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>