ಜೈಪುರ ಸಾಹಿತ್ಯ ಉತ್ಸವದಲ್ಲಿ ಪಾಲ್ಗೊಂಡಿದ್ದ ಆರ್ಎಸ್ಎಸ್ ಪ್ರಚಾರ ಪ್ರಮುಖರಾದ ವೈದ್ಯ ಅವರು, ಮೀಸಲಾತಿಗೆ ಸಂಬಂಧಿಸಿದ ಹೇಳಿಕೆ ನೀಡಿದ್ದಾರೆ. ವೈದ್ಯ ಅವರ ಹೇಳಿಕೆ ಮುಂದಿಟ್ಟುಕೊಂಡು ವಿರೋಧ ಪಕ್ಷಗಳು, ‘ಬಿಜೆಪಿ ಮೀಸಲಾತಿ ವಿರೋಧಿ’ ಎಂದು ಪ್ರಚಾರ ಮಾಡುತ್ತಿವೆ. ಇದನ್ನು ಗಮನಿಸಿದ ಬಿಜೆಪಿ ಮುಖಂಡರು, ‘ಆಗಿರುವ ತೊಂದರೆ ನಿವಾರಿಸಿ’ ಎಂದು ಸಂಘದ ಪ್ರಮುಖರಿಗೆ ಹೇಳಿದ್ದಾರೆ ಎನ್ನಲಾಗಿದೆ.