ಜಲ್ಲಿಕಟ್ಟು ವಿಚಾರವಾಗಿ ತಮಿಳುನಾಡು ಒಗ್ಗಟ್ಟು ಪ್ರದರ್ಶಿಸಿದ ರೀತಿಯಲ್ಲೇ ಕನ್ನಡಿಗರು ಕಂಬಳದ ಪರ ಒಗ್ಗಟ್ಟು ಪ್ರದರ್ಶಿಸಬೇಕು. ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ, ಜಲ್ಲುಕಟ್ಟು ಬಿಕ್ಕಟ್ಟು ಪರಿಹರಿಸುವಲ್ಲಿ ತೋರಿದ ಆಸಕ್ತಿಯನ್ನು ಕಂಬಳದ ಮೇಲಿನ ನಿಷೇಧ ತೆರವಿಗೂ ತೋರಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.