ಪಣಜಿ : ಬೆಂಗಳೂರಿನಲ್ಲಿ ನಡೆಯುವ ವೈಮಾನಿಕ ಪ್ರದರ್ಶನವನ್ನು ಮುಂದಿನ ವರ್ಷ ಗೋವಾಕ್ಕೆ ಸ್ಥಳಾಂತರಿಸಲಾಗುವುದು ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
‘ಈ ವರ್ಷ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿಯೇ ವೈಮಾನಿಕ ಪ್ರದರ್ಶನ ನಡೆಯುವುದು. ಸ್ಥಳೀಯ ಜನ ಒಪ್ಪಿದರೆ, ಮುಂದಿನ ವರ್ಷ ಇದನ್ನು ಗೋವಾಕ್ಕೆ ಸ್ಥಳಾಂತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷ ಗೋವಾದಲ್ಲಿ ರಕ್ಷಣಾ ಪ್ರದರ್ಶನವನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಮುಂದಿನ ವರ್ಷದಿಂದ ವೈಮಾನಿಕ ಪ್ರದರ್ಶನದೊಂದಿಗೆ ಎರಡೂ ಕಾರ್ಯಕ್ರಮಗಳನ್ನು ಗೋವಾಕ್ಕೆ ವರ್ಗಾಯಿಸಲು ಚಿಂತನೆ ನಡೆಸುತ್ತೇವೆ ಎಂದು ಮರ್ಮಗೋವಾದಲ್ಲಿ ಚುನಾವಣಾ ಪ್ರಚಾರದಲ್ಲಿದ್ದ ಪರಿಕ್ಕರ್ ತಿಳಿಸಿದ್ದಾರೆ.