ಇದೇ ವೇಳೆ ರಘುಪತಿ ಸಹ ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದರು. ವೇಗವಾಗಿ ವಾಹನ ಚಲಾಯಿಸಿಕೊಂಡು ಬಂದಿರುವ ಸುಧಾಕರ್, ನಿಯಂತ್ರಣ ಕಳೆದುಕೊಂಡು ರಘುಪತಿ ಅವರ ಕಾರಿಗೆ ಡಿಕ್ಕಿ ಮಾಡಿದ್ದಾನೆ. ಗುದ್ದಿದ ರಭಸಕ್ಕೆ ಆ ಕಾರು ಮಗುಚಿ, ರಸ್ತೆ ಬದಿ ನಿಂತಿದ್ದ ಇನ್ನೊಂದು ಕಾರಿನ ಮೇಲೆ ಬಿದ್ದಿತು ಎಂದು ಪೊಲೀಸರು ಹೇಳಿದರು.