‘ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಘಟನೆ ಕುರಿತು ಮೃತನ ಪೋಷಕರಿಗೆ ಮಾಹಿತಿ ನೀಡಿದ್ದೇವೆ. ಸೋಮವಾರ ಬೆಳಿಗ್ಗೆ ಅವರು ನಗರಕ್ಕೆ ಬರಲಿದ್ದಾರೆ. ಪೋಷಕರು ಕೊಡುವ ದೂರು ಆಧರಿಸಿ ತನಿಖೆ ನಡೆಸಲಾಗುವುದು’ ಎಂದು ದಕ್ಷಿಣ ವಿಭಾಗದ ಡಿಸಿಪಿ ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ.
‘ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಧ್ಯಾಹ್ನ ಏಕಾಏಕಿ ಕೊಠಡಿಯಿಂದ ಹೊರ ಬಂದ ಅಲಂ, ಕಾರಿಡಾರ್ನ ಮೂರು ಅಡಿ ಎತ್ತರದ ಸಿಮೆಂಟ್ ಕಟ್ಟೆ ಹತ್ತಿ ನಿಂತ. ಕೂಡಲೇ ನಾವು ರಕ್ಷಣೆಗೆ ಧಾವಿಸಿದೆವು. ಆದರೆ, ಆತ ಕೆಳಗೆ ಹಾರಿಬಿಟ್ಟ’ ಎಂದು ವಿದ್ಯಾರ್ಥಿಗಳು ಹೇಳಿಕೆ ಕೊಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಮರಣಪತ್ರವಿದೆ: ಮೃತನ ಕೊಠಡಿಯಲ್ಲಿ ಮೂರು ಪುಟಗಳ ಮರಣ ಪತ್ರ ಸಿಕ್ಕಿದ್ದು, ತನ್ನ ಸಾವಿಗೆ ಕಾರಣವೇನು ಎಂಬ ಬಗ್ಗೆ ಆತ ಪತ್ರದಲ್ಲಿ ವಿಸ್ತಾರವಾಗಿ ಬರೆದಿದ್ದಾನೆ ಎಂದು ತಿಳಿದು ಬಂದಿದೆ.