‘ಸನತ್ ಕುಮಾರ ಅವರು ಬಿಜೆಪಿ ಶಾಸಕ ಸಂಜಯ ಪಾಟೀಲ ಅವರ ಆಪ್ತರಾಗಿದ್ದಾರೆ. ಈಚೆಗೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಕ್ಕೆ ಸನತ್ ಕುಮಾರ್ ಅವರೇ ಕಾರಣ ಎಂದು ಭಾವಿಸಿ ದಾಳಿ ನಡೆಸಲಾಗಿದೆ. ಸನತ್ ಕುಮಾರ ಅವರು ಮನೆಯಲ್ಲಿ ಇರಲಿಲ್ಲ. ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಆರೋಪಿಗಳು, ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಅವರ ಪತ್ನಿ ಭಾಗ್ಯಶ್ರೀ ಅವರಿಗೆ ಪ್ರಾಣಬೆದರಿಕೆ ಒಡ್ಡಿದ್ದಾರೆ’ ಎಂದು ಆರೋಪಿಸಲಾಗಿದೆ.