ಚೆನ್ನೈ: ಜಲ್ಲಿಕಟ್ಟು ಕ್ರೀಡೆ ನಡೆಸಲು ಸರ್ಕಾರ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕೆಂದು ಒತ್ತಾಯಿಸಿ ಚೆನ್ನೈನ ಮರೀನಾ ಬೀಚ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಬಲವಂತವಾಗಿ ತೆರವುಗೊಳಿಸುತ್ತಿದ್ದಾರೆ.
‘ಜಲ್ಲಿಕಟ್ಟು ನಡೆಸಲು ಸುಗ್ರೀವಾಜ್ಞೆ ಹೊರಡಿಸಿರುವುದು ತಾತ್ಕಾಲಿಕ ಪರಿಹಾರ. ಜಲ್ಲಿಕಟ್ಟು ಕ್ರೀಡೆಯ ಮೇಲಿನ ನಿಷೇಧ ತೆರವುಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು. ಇದಕ್ಕಾಗಿ ವಿಶೇಷ ಕಾನೂನು ರೂಪಿಸಬೇಕು’ ಎಂದು ಪ್ರತಿಭಟನಾನಿರತರು ಒತ್ತಾಯಿಸುತ್ತಿದ್ದಾರೆ.