<br/> ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಉಲ್ಲೇಖಿಸಿರುವ ಕೊಹ್ಲಿ ಬ್ಯಾಟಿಂಗ್ ವಿಭಾಗದಲ್ಲಿ ‘ಪಂದ್ಯದ ಕೆಲ ಸಂಧರ್ಭಗಳಲ್ಲಿ ರನ್ ಗಳಿಕೆ ಹೆಚ್ಚಿಸಿಕೊಳ್ಳುವ ಅವಶ್ಯಕತೆಯಿದ್ದು, ಸ್ಪರ್ಧಾತ್ಮಕ ಪರಿಸ್ಥಿತಿಗೆ ತಕ್ಕಂತೆ ಉತ್ತಮ ನಿವರ್ಹಣೆ ತೋರುವ ಅಗತ್ಯತೆಗಳಿವೆ ಎಂದು ತಿಳಿಸಿದ್ದಾರೆ.<br/> <br/> ಏಕದಿನ ಸರಣಿಯಲ್ಲಿ ಆರಂಭಿಕ ಆಟಗಾರರು ಬ್ಯಾಟಿಂಗ್ನಲ್ಲಿ ವೈಫಲ್ಯ ಅನುಭವಿಸಿದ್ದರು. ಆದರೂ ಶಿಖರ್ ಧವನ್, ಕೆ.ಎಲ್. ರಾಹುಲ್, ರಹಾನೆ ಅವರನ್ನು ಬೆಂಬಲಿಸಿರುವ ಕೊಹ್ಲಿ, ಆಟಗಾರರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಮೂಲಕ ಅವರನ್ನು ಮತ್ತೆ ಫಾರ್ಮ್ಗೆ ಮರಳಲು ಸಾಧ್ಯವಾಗುತ್ತದೆ ಎಂದು ಆರಂಭಿಕ ಆಟಗಾರರ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದರು.<br/> <br/> ರೋಹಿತ್ ಶರ್ಮಾ, ಶಿಖರ್ ಧವನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಶೀಘ್ರವೇ ಫಾರ್ಮ್ಗೆ ಮರಳುವ ವಿಶ್ವಾಸವನ್ನು ಕೊಹ್ಲಿ ವ್ಯಕ್ತಪಡಿಸಿದ್ದರು.<br/> <br/> 2013ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್ ಆರಂಭಿಕ ಆಟಗಾರರಾಗಿ ಆಶ್ಚರ್ಯಕಾರವಾದ ಆಟವನ್ನು ಪ್ರದರ್ಶಿಸಿದ್ದರು. ಅದೇ ಆಟ ಮತ್ತೊಮ್ಮೆ ಮರುಕಳಿಸಲ್ಲಿದೆ ಎಂದರು.</p></p>