ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಬಂಧ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘಟನೆ ಬಗ್ಗೆ ತಮಿಳುನಾಡು ಸೇರಿದಂತೆ ದೇಶದೆಲ್ಲಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.
ನಟ ಕಮಲ್ ಹಾಸನ್ ಸೇರಿದಂತೆ ಹಿರಿಯ ರಾಜಕಾರಣಿಗಳು ಮತ್ತು ಸಾರ್ವಜನಿಕರು ಪೊಲೀಸರ ಈ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಂತಿರುವ ಆಟೋಗಳಿಗೆ ಪೊಲೀಸ್ ಅಧಿಕಾರಿಯೊಬ್ಬರು ಬೆಂಕಿ ಹಚ್ಚುತ್ತಿರುವ ದೃಶ್ಯ ಆ ವಿಡಿಯೊದಲ್ಲಿದೆ.
ವಿಡಿಯೊ ಬಗ್ಗೆ ಅನುಮಾನ: ಪೊಲೀಸರು ಬೆಂಕಿ ಹಚ್ಚುತ್ತಿರುವ ವಿಡಿಯೊ ನಿನ್ನೆಯದಲ್ಲ ಎಂದು ತಮಿಳುನಾಡು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ಪರಿಶೀಲಿಸಿ ತನಿಖೆ ನಡೆಸಲಾಗುವುದು ಎಂದು ತಮಿಳುನಾಡಿನ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ