ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲ್ಲಿಕಟ್ಟು ಗಲಾಟೆಯಲ್ಲಿ ಆಟೋಗೆ ಬೆಂಕಿ ಇಟ್ಟ ಪೊಲೀಸರು?

Last Updated 24 ಜನವರಿ 2017, 5:42 IST
ಅಕ್ಷರ ಗಾತ್ರ
ADVERTISEMENT

ಚೆನ್ನೈ: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಬಂಧ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಆಟೋಗೆ ಬೆಂಕಿ ಇಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಈ ಘಟನೆ ಬಗ್ಗೆ ತಮಿಳುನಾಡು ಸೇರಿದಂತೆ ದೇಶದೆಲ್ಲಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ನಟ ಕಮಲ್ ಹಾಸನ್ ಸೇರಿದಂತೆ ಹಿರಿಯ ರಾಜಕಾರಣಿಗಳು ಮತ್ತು ಸಾರ್ವಜನಿಕರು ಪೊಲೀಸರ ಈ ಕೃತ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿಂತಿರುವ ಆಟೋಗಳಿಗೆ ಪೊಲೀಸ್ ಅಧಿಕಾರಿಯೊಬ್ಬರು  ಬೆಂಕಿ  ಹಚ್ಚುತ್ತಿರುವ ದೃಶ್ಯ ಆ ವಿಡಿಯೊದಲ್ಲಿದೆ.

ವಿಡಿಯೊ ಬಗ್ಗೆ ಅನುಮಾನ: ಪೊಲೀಸರು ಬೆಂಕಿ ಹಚ್ಚುತ್ತಿರುವ ವಿಡಿಯೊ ನಿನ್ನೆಯದಲ್ಲ ಎಂದು ತಮಿಳುನಾಡು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ಪರಿಶೀಲಿಸಿ ತನಿಖೆ ನಡೆಸಲಾಗುವುದು ಎಂದು ತಮಿಳುನಾಡಿನ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT