ನೋಟು ರದ್ದತಿ ನಂತರ ಹೇರಲಾಗಿರುವ ಹಣ ತೆಗೆಯುವ ಮಿತಿಯನ್ನು ಅಭ್ಯರ್ಥಿಗಳಿಗೆ ಮಾತ್ರ ಸಡಿಲಿಸುವಂತೆ ಚುನಾವಣಾ ಆಯೋಗ ಆರ್ಬಿಐಗೆ ಕೋರಿಕೆ ಸಲ್ಲಿಸಿತ್ತು. ಈ ಸಂಬಂಧ ಚುನಾವಣಾ ಆಯೋಗ ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಅವರಿಗೆ ಪತ್ರ ಬರೆದಿತ್ತು. ಆದರೆ, ಈ ಬೇಡಿಕೆಯನ್ನು ಆರ್ಬಿಐ ತಳ್ಳಿ ಹಾಕಿದೆ. ಇದು ಚುನಾವಣಾ ಆಯೋಗದ ಅಸಮಾಧಾನಕ್ಕೆ ಕಾರಣವಾಗಿದೆ.