ದೊಡ್ಡಬಳ್ಳಾಪುರ: ಜಮ್ಮು ಕಾಶ್ಮೀರದ ಸೇನಾ ಶಿಬಿರದಲ್ಲಿ ಉಂಟಾದ ಹಿಮಪಾತದಲ್ಲಿ ಮೃತಪಟ್ಟ ಯೋಧ ಹಾಸನ ಜಿಲ್ಲೆಯ ಸಂದೀಪ್ ಶೆಟ್ಟಿ ಸೇರಿದಂತೆ ಮೃತ ಯೋಧರಿಗೆ ತಾಲ್ಲೂಕು ಜೆಡಿಎಸ್ ವತಿಯಿಂದ ನಗರದ ಸಿದ್ದಲಿಂಗಯ್ಯ ವೃತ್ತದಲ್ಲಿ ಮೇಣದ ಬತ್ತಿ ಬೆಳಗಿ ಸಂತಾಪ ಸೂಚಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಎಚ್. ಅಪ್ಪಯ್ಯಣ್ಣ ಮಾತನಾಡಿ, ತಾಲೂಕುಜೆಡಿಎಸ್ ಅಧ್ಯಕ್ಷ ಡಾ.ಎಚ್.ಜಿ. ವಿಜಯಕುಮಾರ್, ಪ್ರತಿಕೂಲ ಹವಾಮಾನದಿಂದ ನಮ್ಮ ಯೋಧರು ಬಲಿಯಾಗುತ್ತಿದ್ದಾರೆ ಎನ್ನುವುದು ಗಂಭೀರವಾಗಿ ಯೋಚಿಸಬೇಕಾದ ವಿಚಾರ. ಶತ್ರುಗಳ ದಾಳಿಗೆ ಸಿಲುಕಿ ಮೃತಪಡುವ ಯೋಧರು ಒಂದೆಡೆಯಾದರೆ, ಸಿಯಾಚಿನ್ನಂತಹ ಯುದ್ಧ ಭೂಮಿಯಲ್ಲಿ ಹಿಮಪಾತಗಳಲ್ಲಿ ಸಿಲುಕು ಯೋಧರು ಸಾವಿಗೀಡಾಗುತ್ತಿರುವುದು ದುರಂತದ ಸಂಗತಿ ಎಂದರು. ನಗರಸಭಾ ಸದಸ್ಯ ಟಿ.ಎನ್. ಪ್ರಭುದೇವ್, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಓಬದೇನಹಳ್ಳಿ ಮುನಿಯಪ್ಪ, ಮುಖಂಡರಾದ ಪದ್ಮನಾಭ್, ಮಂಜುನಾಥ್ ಮತ್ತಿತರರು ಭಾಗವಹಿಸಿದ್ದರು.