ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬರುವ ಚುನಾವಣೆ: ಬಿಜೆಪಿಗೆ ಗೆಲುವಿನ ವಿಶ್ವಾಸ

Last Updated 8 ಫೆಬ್ರುವರಿ 2017, 8:41 IST
ಅಕ್ಷರ ಗಾತ್ರ

ಕೊಳ್ಳೇಗಾಲ: ‘ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಲ್ಲಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ’ ಎಂದು ಬಿಜೆಪಿ ಒಬಿಸಿ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಮಣಿಕಂಠ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಬಸ್ತೀಪುರ ರಸ್ತೆಯ ನಾಯ್ಡು ತೋಟದಲ್ಲಿ ಮಂಗಳವಾರ ನಡೆದ ಬಿಜೆಪಿ ಒಬಿಸಿ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.

ಪಕ್ಷದ ಸಂಘಟನೆ ಬೂತ್‌ ಮಟ್ಟದಿಂದ ಬಲಗೊಳ್ಳಬೇಕು. ಮುಂಬರುವ ನಗರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಿ ಹಿಡಿಯುವ ಮೂಲಕ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಯನ್ನು ಬಲಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾಡಳಿತ ಕಾಂಗ್ರೆಸ್‌ ಪಕ್ಷದ ಏಜೆಂಟರಂತೆ ಶಾಸಕರು, ಸಚಿವರು, ಸಂಸದರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ಇತರೆ ಪಕ್ಷದ ಜನರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು.

ಶಾಸಕರೂ ಸಹ ತಮ್ಮ ಪಕ್ಷದ ಜನತೆಗಷ್ಟೇ ಶಾಸಕರಲ್ಲ ಎಂಬುದನ್ನು ಮನಗಾಣಬೇಕು. ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ದೊರಕಿಸಲು ಪಕ್ಷಪಾತ ಮಾಡುವುದು ಸರಿಯಲ್ಲ ಎಂದರು.

ರಾಜ್ಯ ಕಾರ್ಯಕಾರಿಣಿ ಸಮಿತಿಯ ಹುಚ್ಚೇಗೌಡರು ಮಾತನಾಡಿ, ಬಿಜೆಪಿ ಮುಂಬರುವ ಚುನಾವಣೆಯಲ್ಲಿ ಒಬಿಸಿಗೆ ಹೆಚ್ಚಿನ ಸ್ಥಾನಗಳನ್ನು ದೊರಕಿಸುವಂತೆ ರಾಜ್ಯ ಘಟಕದ ಅಧ್ಯಕ್ಷರ ಗಮನ ಸೆಳೆಯುವುದಾಗಿ. ಜಿಲ್ಲೆಯಲ್ಲಿ ಒಂದು ಸ್ಥಾನವನ್ನು ಒಬಿಸಿಗೆ ದೊರಕಿಸಲು ಮನವಿ ಮಾಡುವುದಾಗಿ ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಟರಾಜೇಗೌಡ, ಮುನಿವೆಂಕಟಶೆಟ್ಟಿ  ಮಾತನಾಡಿದರು.

ಜಿಲ್ಲಾ ಸಮಿತಿಯ ದೇವಿಕಾ ವರದರಾಜು, ಮಂಗಳಮ್ಮ, ಟೌನ್‌ ಅಧ್ಯಕ್ಷ ಮಹದೇವಪ್ಪ, ವಿಶ್ವನಾಥ್‌, ಕೆ.ಎಂ. ಮಂಜು, ನಾರಾಯಣಶೆಟ್ಟಿ, ಬಸವಶೆಟ್ಟಿ, ರಂಗಸ್ವಾಮಿ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT