ಗೊಟಗೋಡಿ (ಹಾವೇರಿ ಜಿಲ್ಲೆ): ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಚಿನ್ನಪ್ಪ ಗೌಡ ರಾಜೀನಾಮೆ ನೀಡಿದ್ದು, ಪ್ರಭಾರ ಕುಲಪತಿಯಾಗಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ಡಿ.ಬಿ. ನಾಯಕ ಗುರುವಾರ ಅಧಿಕಾರ ಸ್ವೀಕರಿಸಿದರು.
‘ಅನಾರೋಗ್ಯದ ಹಿನ್ನೆಲೆಯಲ್ಲಿ ಮತ್ತು ಒತ್ತಡದ ಕೆಲಸ ಹಾಗೂ ಕರ್ತವ್ಯ ನಿರ್ವಹಿಸಲು ಕಷ್ಟವಾಗುತ್ತಿದ್ದು, ವೈಯಕ್ತಿಕವಾಗಿ ನಿರ್ಧಾರ ಕೈಗೊಂಡು ರಾಜೀನಾಮೆ ನೀಡಿದ್ದೇನೆ.