ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ‘ಪ್ರಜಾವಾಣಿ’ಯ ಅರೆಕಾಲಿಕ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಚೇತನ್ ರಾಮ್ ಇರಂತಕಜೆ(46) ಅವರು ಶನಿವಾರ ಬೆಳಗಿನಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.
ಚೇತನ್ರಾಮ್ ಸುಳ್ಯ ಸಮೀಪದ ಮರಕಂಜೆ ಗ್ರಾಮದವರು. ಪ್ರಗತಿಪರ ಕೃಷಿಕರಾಗಿದ್ದ ಅವರು, 10 ವರ್ಷಗಳಿಂದ ‘ಪ್ರಜಾವಾಣಿ‘ಯ ಅರೆ ಕಾಲಿಕ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.