ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಅಧ್ಯಕ್ಷರಾಗಿ ಸುವಿನ್ ಗಣಪತಿ

Last Updated 11 ಫೆಬ್ರುವರಿ 2017, 7:43 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಬಾಚಿಮಂಡ ಸುವಿನ್ ಗಣಪತಿ, ಉಪಾಧ್ಯಕ್ಷರಾಗಿ ಕಳ್ಳೆಂಗಡ ಬಾಲಕೃಷ್ಣ ಅವಿರೋಧವಾಗಿ ಆಯ್ಕೆಯಾದರು.

ಎಪಿಎಂಸಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸುವಿನ್ ಗಣಪತಿ, ಉಪಾಧ್ಯಕ್ಷ ಸ್ಥಾನಕ್ಕೆ ಬಾಲಕೃಷ್ಣ ಹೊರತುಪಡಿಸಿ ಇತರರು ನಾಮಪತ್ರ ಸಲ್ಲಿಸಿರಲಿಲ್ಲ.

ಸುವಿನ್ ಗಣಪತಿ ಅವರ ಹೆಸರನ್ನು ಆದೇಂಗಡ ವಿನು ಚಂಗಪ್ಪ ಸೂಚಿಸಿದರು. ಅಜ್ಜಿಕುಟ್ಟೀರ ಪ್ರವೀಣ್ ಅನುಮೋದಿಸಿದರು. ಬಾಲಕೃಷ್ಣ ಹೆಸರನ್ನು  ಮಾಚಂಗಡ ಸುಜಾ ಪೂಣಚ್ಚ ಸೂಚಿಸಿದರು. ಚಿಯಕ್‌ಪೂವಂಡ ಜಿ.ಸುಬ್ರಮಣಿ ಅನುಮೋದಿಸಿದರು.

ಸಮಿತಿಯ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸದಸ್ಯರೇ ಜಯಗಳಿಸಿದ್ದರು. ಸದಸ್ಯರಾದ ಕೆ.ಯು. ಭೀಮಣಿ, ಜೆ.ಕೆ.ಅಯ್ಯಪ್ಪ, ಹೆಚ್.ಎನ್. ಮೋಹನ್ ರಾಜ್, ನಾಮೇರ ಧರಣಿ, ಅಜ್ಜಿಕುಟ್ಟೀರ ಎಂ. ಮುತ್ತಪ್ಪ, ಬೊಳ್ಳಜೀರ ಸುಶೀಲಾ, ನಾಮ ನಿರ್ದೇಶಕರಾದ  ಅಜ್ಜಿಕುಟ್ಟೀರ ನರೇನ್ ಕಾರ್ಯಪ್ಪ ,ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಅರುಣ್ ಭೀಮಯ್ಯ,ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್,ಉಪಾಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಹಾಜರಿದ್ದರು.

ತಹಶೀಲ್ದಾರ್ ಮಹದೇವಸ್ವಾಮಿ ಚುನಾವಣಾಧಿಕಾರಿ ಆಗಿದ್ದರು. ಎಪಿಎಂಸಿ ಕಾರ್ಯದರ್ಸಿ ಮಹೇಶ್ ಇದ್ದರು.

ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅಧ್ಯಕ್ಷ ಸುವಿನ್ ಗಣಪತಿ, ಸರ್ಕಾರದ  ಯೋಜನೆಗಳನ್ನು ರೈತರಿಗೆ ತಲುಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT