ಉಡುಪಿ: ಬೇಡಿಕೆಗಳನ್ನು ಈಡೇರಿಸುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಮರಳು ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಕರ್ನಾಟಕ ಕಾರ್ಮಿಕರ ವೇದಿಕೆಯ ನೇತೃ ತ್ವದಲ್ಲಿ ವಿವಿಧ ಸಂಘಟನೆಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ಶುಕ್ರವಾರ ಹಿಂದಕ್ಕೆ ಪಡೆದವು.
ಸತ್ಯಾಗ್ರಹ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಗಣಿ ಮತ್ತು ಭೂ ವಿಜ್ಞಾನ ಇಲಾ ಖೆಯ ಉಪ ನಿರ್ದೇಶಕ ಕೋದಂಡ ರಾಮ ಅವರು ಹೋರಾಟಗಾರರಿಂದ ಮನವಿ ಸ್ವೀಕರಿಸಿದರು. ಕರಾವಳಿ ನಿಯಂ ತ್ರಣೇತರ ವಲಯದಲ್ಲರುವ ಮರಳು ಬ್ಲಾಕ್ಗಳಲ್ಲಿ ಮರಳುಗಾರಿಕೆ ಆರಂಭಿ ಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾ ಗುತ್ತದೆ. ಕಲ್ಲು ಗಣಿಗಾರಿಕೆಗೆ ಸಹ ಪರವಾ ನಗಿ ನೀಡಲಾಗುತ್ತದೆ ಎಂದು ಅವರು ಭರವಸೆ ನೀಡಿದರು. ತಹಶೀಲ್ದಾರ್ ಮಹೇಶ್ಚಂದ್ರ ಇದ್ದರು.