ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ವಕೀಲರ ವೇದಿಕೆಯು ಒಳ್ಳೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಾಸಕ ಸತೀಶ ಜಾರಕಿಹೊಳಿ ಅವರು ತಿದ್ದುಪಡಿಗಳನ್ನು ಒಳಗೊಂಡ ಸಿಆರ್ ಪಿಸಿ ಪುಸ್ತಕವನ್ನು ಬಿಡುಗಡೆ ಮಾಡಿದರು. ವಾಲ್ಮೀಕಿ ನಾಯಕ ವಕೀಲರ ವೇದಿಕೆ ಅಧ್ಯಕ್ಷ ಕೆ.ಎಚ್. ಮಲ್ಲೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾರಂಭದ ನಂತರ ನಡೆದ ವಿಚಾರ ಗೋಷ್ಠಿಯಲ್ಲಿ ಸುಪ್ರೀಂಕೋರ್ಟ್ ವಕೀಲ ರಾಜಾ ವೆಂಕಟಪ್ಪ ನಾಯಕ, ಪ್ರೊ.ಹವಾಲ್ದಾರ ಅವರು ವಿಷಯ ಮಂಡಿಸಿದರು.
ವೇದಿಕೆಯಲ್ಲಿ ವಾಲ್ಮೀಕಿ ನಾಯಕ ವಕೀಲರ ವೇದಿಕೆ ಪದಾಧಿಕಾರಿಗಳಾದ ಬಿ.ಶಿವಪ್ಪ, ಎಚ್.ದೇವೇಂದ್ರಪ್ಪ, ಶಾಸಕ ರಾದ ಬಸವರಾಜ ಪಾಟೀಲ ಇಟಗಿ, ಡಾ.ಎಸ್.ಶಿವರಾಜ ಪಾಟೀಲ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.