ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಳನೀರು ಪ್ರೋತ್ಸಾಹಿಸಿ

ವಾಚಕರ ವಾಣಿ
Last Updated 12 ಫೆಬ್ರುವರಿ 2017, 19:30 IST
ಅಕ್ಷರ ಗಾತ್ರ

ರೈತರಿಗೆ ನೆರವಾಗಲು ರಾಜ್ಯದ ಮಲ್ಟಿಪ್ಲೆಕ್ಸ್ ಹಾಗೂ ಚಲನಚಿತ್ರ ಮಂದಿರಗಳಲ್ಲಿ ಎಳನೀರು ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರು ಸರ್ಕಾರವನ್ನು ಒತ್ತಾಯಿಸಿರುವುದು (ಪ್ರ.ವಾ., ಫೆ. 7) ಸಮಂಜಸವಾಗಿದೆ.

ಬಹುರಾಷ್ಟ್ರೀಯ ಕಂಪೆನಿಗಳ ತಂಪು ಪಾನೀಯದ  ಬದಲು ಎಳನೀರು ಮಾರಾಟವನ್ನು ಪ್ರೋತ್ಸಾಹಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರ ಹಿತ ಕಾಯುವುದಾಗಿ ಹೇಳುತ್ತಾ ಮೊಸಳೆ ಕಣ್ಣೀರು ಸುರಿಸುವ ಜನಪ್ರತಿನಿಧಿಗಳು ಇಂಥ ಕ್ರಮಗಳ ಮೂಲಕ ಕೃಷಿ ಉತ್ಪನ್ನಗಳಿಗೆ ಉತ್ತೇಜನ ನೀಡಬೇಕು. ಇದರಿಂದ ಜನರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರದ ಕ್ರಮ ಅನುಕರಣೀಯ.
- ದಿನೇಶ್ ಕೆ. ಕಾರ್ಯಪ್ಪ, ಮಡಿಕೇರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT