ರೈತರಿಗೆ ನೆರವಾಗಲು ರಾಜ್ಯದ ಮಲ್ಟಿಪ್ಲೆಕ್ಸ್ ಹಾಗೂ ಚಲನಚಿತ್ರ ಮಂದಿರಗಳಲ್ಲಿ ಎಳನೀರು ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರು ಸರ್ಕಾರವನ್ನು ಒತ್ತಾಯಿಸಿರುವುದು (ಪ್ರ.ವಾ., ಫೆ. 7) ಸಮಂಜಸವಾಗಿದೆ.
ಬಹುರಾಷ್ಟ್ರೀಯ ಕಂಪೆನಿಗಳ ತಂಪು ಪಾನೀಯದ ಬದಲು ಎಳನೀರು ಮಾರಾಟವನ್ನು ಪ್ರೋತ್ಸಾಹಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ರೈತರ ಹಿತ ಕಾಯುವುದಾಗಿ ಹೇಳುತ್ತಾ ಮೊಸಳೆ ಕಣ್ಣೀರು ಸುರಿಸುವ ಜನಪ್ರತಿನಿಧಿಗಳು ಇಂಥ ಕ್ರಮಗಳ ಮೂಲಕ ಕೃಷಿ ಉತ್ಪನ್ನಗಳಿಗೆ ಉತ್ತೇಜನ ನೀಡಬೇಕು. ಇದರಿಂದ ಜನರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ತಮಿಳುನಾಡು ಸರ್ಕಾರದ ಕ್ರಮ ಅನುಕರಣೀಯ.
- ದಿನೇಶ್ ಕೆ. ಕಾರ್ಯಪ್ಪ, ಮಡಿಕೇರಿ