ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸಿದ್ರಾಮ ಹೊನ್ಕಲ್

Last Updated 13 ಫೆಬ್ರುವರಿ 2017, 9:40 IST
ಅಕ್ಷರ ಗಾತ್ರ

ಶಹಾಪುರ: ಮಾರ್ಚ್ 4ರಂದು ನಡೆಯಲಿರುವ ಶಹಾಪುರ ತಾಲ್ಲೂಕು ದ್ವಿತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಸಿದ್ರಾಮ ಹೊನ್ಕಲ್ ಆಯ್ಕೆಯಾಗಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಲಿಂಗಪ್ಪ ಆನೇಗುಂದಿ ನೇತೃತ್ವದಲ್ಲಿ ಭಾನುವಾರ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಸಿದ್ರಾಮ ಹೊನ್ಕಲ್ ಆಯ್ಕೆ ಮಾಡಲಾಯಿತು.

ಕತೆಗಾರ, ಲೇಖಕ, ಹಾಗೂ ಪ್ರವಾಸ ಕಥನ ಸೇರಿದಂತೆ 30 ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಕಳೆದ 30 ವರ್ಷಗಳಿಂದ ಸಾಹಿತ್ಯ ರಚನೆಯಲ್ಲಿ ತೊಡಗಿದ್ದಾರೆ ಎಂದು ಪರಿಷತ್ ಅಧ್ಯಕ್ಷ ಸಿದ್ದಲಿಂಗಪ್ಪ ಆನೇಗುಂದಿ ತಿಳಿಸಿದರು.

ಸಾಹಿತಿಗಳಾದ ಶಿವಣ್ಣ ಇಜೇರಿ, ವಿಶ್ವಾರಾಧ್ಯ ಸತ್ಯಂಪೇಟೆ, ಚಂದ್ರಕಾಂತ ಕರದಳ್ಳಿ, ಸಣ್ಣ ನಿಂಗಪ್ಪ ನಾಯ್ಕೋಡಿ, ಡಾ.ಎಂ.ಎಸ್.ಶಿರವಾಳ, ನೀಲಕಂಠ ಬಡಿಗೇರ, ಬಸವರಾಜ ಅರುಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT