ಬಂಧಿತ ಆರೋಪಿ ಕಲೀಲ್ ನೀಡಿದ ಮಾಹಿತಿ ಆಧರಿಸಿ ನಗರದ ವಿವಿಧ ಬಡಾವಣೆಗಳಲ್ಲಿನ ಕಸಾಯಿ ಖಾನೆಗಳ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಿದ್ದು, ಮಾಂಸಕ್ಕಾಗಿ ಕಡಿಯಲು ಕೂಡಿಕೊಂಡಿದ್ದ ಹಸುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೂ ಕಸಾಯಿ ಕಾನೆಗಳಿಗೆ ಬೀಗ ಜಡಿಯಲಾಗಿದ್ದು, ಪೊಲೀಸ್ ಕಾವಲು ಹಾಕಲಾಗಿದೆ. ಕಸಾಯಿ ಖಾನೆಯ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.