ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ಅಕ್ರಮ ಸಾಗಣೆಗೆ ತಡೆ, 6 ಕಸಾಯಿ ಖಾನೆಗೆ ಬೀಗ, 50ಕ್ಕೂ ಹೆಚ್ಚು ಗೋವು ವಶ

Last Updated 13 ಫೆಬ್ರುವರಿ 2017, 9:58 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಗ್ರಾಮಾಂತರ ಠಾಣೆ ಪೊಲೀಸರು ಸೋಮವಾರ ನಸುಕಿನಲ್ಲಿ ದಾಳಿ ನಡೆಸಿ ಅಕ್ರಮ ಗೋವು ಸಾಗಣೆಯನ್ನು ತಡೆದಿದ್ದು, ನಗರದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಆರು ಕಸಾಯಿ ಖಾನೆಗಳಿಂದ ಒಟ್ಟು 50ಕ್ಕೂ ಹೆಚ್ಚು ಹಸುಗಳನ್ನು ವಶಕ್ಕೆ ಪಡೆದಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಬೇಲೂರು ತಾಲ್ಲೂಕು ಹನಿಕೆ ಸಂತೆಯಿಂದ ಚಿಕ್ಕಮಗಳೂರಿಗೆ ಅಕ್ರಮವಾಗಿ ವಾಹನದಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 16 ಜಾನುವಾರುಗಳನ್ನು ನಗರದ ಹೊರ ವಲಯದಲ್ಲಿ ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿ ಕಲೀಲ್‌ ನೀಡಿದ ಮಾಹಿತಿ ಆಧರಿಸಿ ನಗರದ ವಿವಿಧ ಬಡಾವಣೆಗಳಲ್ಲಿನ ಕಸಾಯಿ ಖಾನೆಗಳ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಿದ್ದು, ಮಾಂಸಕ್ಕಾಗಿ ಕಡಿಯಲು ಕೂಡಿಕೊಂಡಿದ್ದ ಹಸುಗಳನ್ನು ವಶಕ್ಕೆ ಪಡೆದಿದ್ದಾರೆ. ಆರೂ ಕಸಾಯಿ ಕಾನೆಗಳಿಗೆ ಬೀಗ ಜಡಿಯಲಾಗಿದ್ದು, ಪೊಲೀಸ್‌ ಕಾವಲು ಹಾಕಲಾಗಿದೆ. ಕಸಾಯಿ ಖಾನೆಯ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT