ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಎಂ.ಎನ್. ಪುಷ್ಪಾವತಿ ಮಾತನಾಡಿ, ಗ್ರಾಮ ಪಂಚಾಯ್ತಿಗಳಲ್ಲಿನ ನೌಕರರಿಗೆ ಸರಿಯಾದ ಸಮಯಕ್ಕೆ ವೇತನ ಪಾವತಿ ಮಾಡುತ್ತಿಲ್ಲ. ಕೆಲ ಪಂಚಾಯ್ತಿಗಳು ಏಳೆಂಟು ತಿಂಗಳಾದರೂ ನೌಕರರ ವೇತನವನ್ನು ಪಾವತಿ ಮಾಡಿಲ್ಲ. ಇದರಿಂದ ಕರ ವಸೂಲಾತಿ ಶೇಕಡವಾರು ಪ್ರಮಾಣ ಕುಂಠಿತವಾಗಿದೆ. ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆಗೆ ತಾಲ್ಲೂಕು ಪಂಚಾಯ್ತಿ ಪ್ರತಿನಿಧಿಗಳನ್ನು ಆಹ್ವಾನಿಸಬೇಕು. ಸ್ಥಳೀಯ ಸಮಸ್ಯೆಗಳ ಬಗ್ಗೆ ಈ ಜನಪ್ರತಿನಿಧಿಗಳಿಗೆ ಸಂಪೂರ್ಣ ಮಾಹಿತಿ ಇರುತ್ತದೆ. ವಸತಿ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ ಮನೆಗಳ ವಿತರಣೆ ಕಾರ್ಯ ಸಮರ್ಪಕವಾಗಿ ಆಗುತ್ತಿಲ್ಲ ಎಂದು ಹೇಳಿದರು.
ತಾಲ್ಲೂಕು ಪಂಚಾಯ್ತಿ ಇಒ ಜಿ.ಎನ್. ಕುಮಾರ್, ಸದಸ್ಯರಾದ ಜಗದೀಶ್, ಗಾಯಿತ್ರಿಬಾಯಿ, ಸುಧಾ ಉಪಸ್ಥಿತರಿದ್ದರು.