ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಉಜ್ವಲ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿ

ಕಾಲೇಜು ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭ: ಕೆ.ಬಿ.ಚಂದ್ರಶೇಖರ್ ಅಭಿಮತ
Last Updated 16 ಫೆಬ್ರುವರಿ 2017, 9:00 IST
ಅಕ್ಷರ ಗಾತ್ರ
ಕೆ.ಆರ್.ಪೇಟೆ: ದೇಶದ ಭವಿಷ್ಯ ಯುವಜನರ ಕೈಯಲ್ಲಿದ್ದು, ಜ್ಞಾನ ವೃದ್ಧಿಸಿಕೊಂಡು ದೇಶ ಹಿತಕಾಯುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ಹೊರಬೇಕು ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅಭಿಪ್ರಾಯಪಟ್ಟರು.
 
ಪಟ್ಟಣದ ಕೃಷ್ಣರಾಜ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಕಾಲೇಜು ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಅಂಕ ತೆಗೆದು ಜ್ಞಾನ ಸಂಪಾದಿಸಿದರೆ ಮಾತ್ರ ಉದ್ಯೋಗ ಲಭಿಸುತ್ತದೆ.  ರಾಜಕಾರಣಿಗಳ, ಉನ್ನತ ಅಧಿಕಾರಿಗಳ ಪ್ರಭಾವ ಬಳಸಿ ಅಥವಾ ಹಣಬಲದಿಂದ ಉದ್ಯೋಗ ಪಡೆಯುವ ಕಾಲ ಈಗಿಲ್ಲ. ಈಗ ಏನಿದ್ದರೂ ಸ್ಪರ್ಧಾಯುಗ. ಅದಕ್ಕೆ ನೀವು ಸಿದ್ಧರಾಗಬೇಕು ಎಂದರು. 
 
ಸಿಪಿಐ ಎಚ್.ಬಿ.ವೆಂಕಟೇಶಯ್ಯ ಮಾತನಾಡಿ, ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಳ್ಳಬೇಕು. ಮೊಬೈಲ್ ಅವಲಂಬನೆ ಬಿಡಬೇಕು. ಹದಿ ವಯಸ್ಸಿನಲ್ಲಿಯೇ ಪ್ರೀತಿ-ಪ್ರೇಮದ ಬಲೆಗೆ ಸಿಲುಕಿ ಭವಿಷ್ಯಕ್ಕೆ ಕುತ್ತು ತಂದುಕೊಳ್ಳಬಾರದು ಎಂದು ಕಿವಿ ಮಾತು ಹೇಳಿದರು.  ಕಾಲೇಜಿನ ಹಿರಿಯ ವಿದ್ಯಾರ್ಥಿ ತಾಲ್ಲೂಕು ಪಂಚಾಯತಿ ಸದಸ್ಯ ಬಿ.ಎನ್.ದಿನೇಶ್ ಅವರನ್ನು ವಿದ್ಯಾರ್ಥಿ ಸಂಘದ ವತಿಯಿಂದ ಗೌರವಿಸಲಾಯಿತು. 
 
ಅಧ್ಯಕ್ಷತೆಯನ್ನು ಬಂಡಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ರಾಮಯ್ಯ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಜಿ.ಬಿ.ಮಲ್ಲಪ್ಪ,  ಕೆ.ಬಿ.ನಂದೀಶ್, ಕೆ.ಸಿ.ರಾಮ ಚಂದ್ರೇ ಗೌಡ,  ಎಸ್.ಬಿ.ಲೋಕೇಶ್,  ಹರಿಚರಣ ತಿಲಕ್,  ಹರೀಶ್ ಬಾಬು, ರಾಮ ಲಿಂಗು, ಕೃಷ್ಣಪ್ಪ, ಸಿ.ಕೆ.ನಂಜೇಗೌಡ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT