ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬಿಲ್ಲಮಾರನಹಳ್ಳಿ ಭೀಮ್ಜಿ ಬಡಾವಣೆಯಲ್ಲಿ ದಲಿತ ಸಂಘರ್ಷ ಸಮಿತಿಯ (ಸಮತಾವಾದ) ಶಾಖೆಯನ್ನು ಉದ್ಘಾಟಿಸಲಾಯಿತು.
ಬಳಿಕ ಮಾತನಾಡಿದ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಎಚ್.ಮಾರಪ್ಪ, ‘ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಸರ್ಕಾರಗಳು ಯಥಾವತ್ತಾಗಿ ಜಾರಿಗೆ ತಂದಿದ್ದರೆ ಇಂದು ಯಾವುದೇ ಹೋರಾಟಗಳ ಅವಶ್ಯಕತೆ ಇರುತ್ತಿರಲಿಲ್ಲ’ ಎಂದರು.
‘ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಪೋಷಕರು ಪ್ರಯತ್ನಿಸಬೇಕು. ಶಿಕ್ಷಣ ಪಡೆದರೆ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಗುತ್ತದೆ’ ಎಂದರು.