ನವದೆಹಲಿ: ನ್ಯಾಯಾಧೀಶರಾದ ಎನ್.ಕೆ. ಸುಧೀಂದ್ರರಾವ್ ಹಾಗೂ ಎಚ್.ಬಿ. ಪ್ರಭಾಕರ ಶಾಸ್ತ್ರಿ ಅವರನ್ನು ರಾಜ್ಯ ಹೈಕೋರ್ಟ್ನ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.
ಹೈಕೋರ್ಟ್ನ ನೇಮಕಾತಿ ವಿಭಾಗದ ರಿಜಿಸ್ಟ್ರಾರ್ ಆಗಿ ಎನ್.ಕೆ. ಸುಧೀಂದ್ರರಾವ್ ಹಾಗೂ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯಮಂಡಳಿಯ ಮುಖ್ಯಸ್ಥರಾಗಿ ಪ್ರಭಾಕರ ಶಾಸ್ತ್ರಿ ಸೇವೆ ಸಲ್ಲಿಸುತ್ತಿದ್ದಾರೆ. ಇವರಿಬ್ಬರೂ 2002ರಲ್ಲಿ ಜಿಲ್ಲಾ ನ್ಯಾಯಧೀಶರಾಗಿ ಆಯ್ಕೆಯಾಗಿದ್ದರು.